ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು
ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ.
ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ, ಕೇಶವಪುರ ಮತ್ತು ಬಟ್ಟೆಮಲ್ಲಪ್ಪ ಭಾಗಕ್ಕೆ ರೌಂಡ್ಸ್ ಹೋಗಿದ್ದಾರೆ. ಈ ವೇಳೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಆಡುವವರಿಂದ ಪೋನ್ ಪೇ ಮೂಲಕ ಹಣವನ್ನು ಸ್ವೀಕರಿಸಿದ್ದಾರೆ.
ಹೆಚ್.ಸಿ ಪ್ರಕಾಶ್ ಅವರು ಪೋನ್ ಪೇ ಮೂಲಕ ಓಸಿ ದಂಧೆಕೋರರಿಂದ ಲಂಚವಾಗಿ ಪೋನ್ ಪೇ ಮೂಲಕ ಹಣ ಸ್ವೀಕರಿಸಿದಂತ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸೂಕ್ತ ತನಿಖೆಗೆ ಇಲಾಖೆ ಆದೇಶಿಸಿತ್ತು.
ಹೊಸನಗರ ಠಾಣೆಯ ಪಿಎಸ್ಐ ಅವರು ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್ ಎನ್ ಅವರು ಪೋನ್ ಪೇ ಮೂಲಕ ಓಸಿ, ಮಟ್ಕಾ, ಇಸ್ಪೀಟ್ ಆಡುವವರಿಂದ ವೈಯಕ್ತಿಕವಾಗಿ ಹಣ ಪಡೆದಿದ್ದರ ಬಗ್ಗೆ ತನಿಖೆ ನಡೆಸಿದಾಗ, ಅದು ಸತ್ಯವೆಂಬುದಾಗಿ ತಿಳಿದು ಬಂದಿತ್ತು. ಈ ವರದಿಯನ್ನು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರಿಗೆ ಸಲ್ಲಿಸಿದ್ದರು.
ಈ ವರದಿಯನ್ನು ಆಧರಿಸಿ, ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಹೊಸನಗರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್ ಎನ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಮೂಲಕ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತ ಕೆಲಸ ಮಾಡಿದಂತ ಹೆಚ್.ಸಿಗೆ ಬಿಸಿ ಮುಟ್ಟಿಸಿದ್ದಾರೆ.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…