ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ.
ನಡೆದಿದ್ದೇನು..!???
ದಿನಾಂಕಃ 09-08-2024 ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು. ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆರವರ ಮಾರ್ಗದರ್ಶನದಲ್ಲಿ ಶಿಕಾರಿಪುರದ ಡಿವೈಎಸ್ಪಿ ಕೇಶವ್, ಸಿಪಿಐ ರುದ್ರೇಶ್ ರವರ ಮೇಲ್ವಿಚಾರಣೆಯಲ್ಲಿ ಪಿಎಸ್ಐ ಪ್ರಶಾಂತ್ ಕುಮಾರ್ ಟಿ.ಬಿ.ರವರ ನೇತೃತ್ವದಲ್ಲಿ ಪಿಎಸ್ಐ ಪುಷ್ಪಾ, ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ಸಂತೋಷ್, ಟೀಕಪ್ಪ, ಪಿಸಿ ಸಲ್ಮಾನ್, ಕಾರ್ತಿಕ್, ಅಶೋಕ್ ಮತ್ತು ಪ್ರೇಮಾ ಬಾಯಿ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ತನಿಖಾ ತಂಡವು ದಿನಾಂಕಃ 23-08-2024 ರಂದು ಪ್ರಕರಣದ ಆರೋಪಿ ಶಿವರಾಜ್ @ ಕುಮಾರ, 26 ವರ್ಷ, ಆರಿಕಟ್ಟೆ ಗ್ರಾಮ, ಹಿರೇಕೆರೂರು ತಾ॥, ಹಾವೇರಿ ಜಿಲ್ಲೆ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲ್ಯ 2,40,000/- ರೂಗಳ 04 ಹಸುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…