ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ ಸಮ್ಮೇಳನಕ್ಕೆ ಆಹ್ವಾನ ಬಂದಿರುವುದಕ್ಕೆ ನನಗೆ ಹಾಗೂ ನನ್ನ ಪತ್ನಿ  ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷೆ ಪ್ರಮೀಳಾ ಲಕ್ಷ್ಮಣ ಗೌಡರವರಿಗೆ ತುಂಬಾ ಸಂತಸವಾಗಿದೆ ಎಂದರು.

ನನ್ನ ಅಳಿಯರಾದ ಮನು ಗೋರೂರ್ ರವರು ಕಳೆದ ಹತ್ತು ವರ್ಷಗಳಿಂದ ಅಮೆರಿಕದ ವಿವಿಧ ಕನ್ನಡ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದು ಈ ಬಾರಿ ನಡೆಯುವ ಅಕ್ಕ ಸಮ್ಮೇಳನದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಮೆರಿಕ ಕನ್ನಡ ಕೂಟಗಳ ಒಕ್ಕೂಟವು (ಅಕ್ಕ) ಮುಂಬರುವ ಆಗಸ್ಟ್ 30ರಿಂದ ಸೆ 1ರವರೆಗೆ ಅಮೆರಿಕದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ 12ನೇ ವಿಶ್ವ ಕನ್ನಡ ಸಮ್ಮೇಳನ ಹಮ್ಮಿಕೊಂಡಿದೆ. ವಾಷಿಂಗ್ಟನ್‌ ಡಿ.ಸಿ. ಕಾವೇರಿ ಕನ್ನಡ ಸಂಘ, ರಿಚ್ಮಂಡ್‌ ಕನ್ನಡ ಸಂಘದ ಆಶ್ರಯದಲ್ಲಿ ಈ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

ಅಕ್ಕ ಸಮ್ಮೇಳನಕ್ಕೆ ತೆರಳುತ್ತಿರುವ ಲಕ್ಷ್ಮಣಗೌಡ ದಂಪತಿಗಳಿಗೆ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಅಧ್ಯಕ್ಷರಾದ ರಾಮಚಂದ್ರ ಕಾರ್ಯದರ್ಶಿ ಸೆಬಾಸ್ಟಿಯನ್ ,ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷರಾದ ಹಾಲುಗುಡ್ಡೆ ಹರೀಶ್ ರವರು ಮತ್ತು ಉಪಾಧ್ಯಕ್ಷರಾದ ಎಂಎಂ ಪರಮೇಶ್ , ವಜ್ರಾಕ್ಷಮ್ಮ  ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಇ ಡಿ ಮಂಜುನಾಥ್ ಕಲ್ಲೂರ್ , ಖಜಾಂಚಿ ಟಿ ಎಂ ಕೃಷ್ಣಮೂರ್ತಿಯವರು ಮತ್ತು ಸಹ ಕಾರ್ಯದರ್ಶಿವರಾದ ಷಣ್ಮುಖಪ್ಪ ಗೌಡ ಬೈರಾಪುರ ಸಂತೋಷ್ ಕುಮಾರ್ ಹೆಚ್ ವೈ ಹಾಲ್ಗುಡ್ಡೆ ಮತ್ತು ಎಲ್ಲಾ ನಿರ್ದೇಶಕರುಗಳು ತಾಲೂಕ್ ಒಕ್ಕಲಿಗರ ಸಂಘ  ಹಾಗೂ ರೋಟರಿ ಕ್ಲಬ್ ನ ಎಲ್ಲಾ ಪದಾಧಿಕಾರಿಗಳು ಶುಭಾಶಯಗಳನ್ನು ಕೋರಿದ್ದಾರೆ.

12 ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಆಹ್ವಾನಿತರಾಗಿ ಅಮೆರಿಕಾಕ್ಕೆ ತೆರಳುತ್ತಿರುವ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣ ಗೌಡ ಹಾಗೂ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷೆ ಪ್ರಮೀಳಾ ಎಂ ಗೌಡ ರವರಿಗೆ ಪೋಸ್ಟ್ ಮ್ಯಾನ್ ನ್ಯೂಸ್ ವತಿಯಿಂದ ಹಾರ್ದಿಕ ಶುಭಾಶಯಗಳು..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

3 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

3 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

3 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

3 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

12 hours ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

1 day ago