ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು
ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ.
ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ ಸರಸು ಎಂಬ ಉತ್ತಮ ಸ್ಥಳವಿದೆ ನೋಡಿಕೊಂಡು ಬನ್ನಿ ಎಂದು ತಿಳಿಸಿದ್ದರು ಇದರ ಹಿನ್ನೆಲೆ ಚಂಪಕ ಸರಸುವಿಗೆ ಬಂದ ಕುಶಾಲ್ ಮತ್ತು ತಂಡದವರು ಫೋಟೋಶೂಟ್ ಕೂಡ ಮಾಡಿದ್ದಾರೆ.
ಚಂಪಕ ಸರಸುವಿನಲ್ಲಿ ಕೆಲ ಸ್ಥಳೀಯ ಯುವಕರು ಈಜಾಡುತ್ತಿದ್ದನ್ನು ಕಂಡು ಕುಶಾಲ್ ಕೂಡ ಬಟ್ಟೆ ತೆಗೆದು ಈಜಾಡಲು ಪ್ರಾರಂಭಿಸಿದ್ದಾನೆ, ಆದರೆ ಕೆಲ ಹೊತ್ತಿನಲ್ಲಿ ನೀರಿನಲ್ಲಿ ಮುಳುಗಿದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಸ್ನೇಹಿತರಿಗೆ ಭಯವನ್ನುಂಟುಮಾಡಿದೆ, ತಕ್ಷಣ ಅವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ, ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರತೆಗೆದಿದ್ದಾರೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…