January 11, 2026

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ.

ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *

Exit mobile version