ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್

ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್

ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್

ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆತ ಎಂಎಲ್ಎ ಗೋಪಾಲಕೃಷ್ಣ ಬೇಳೂರು ಅಂತ ಹೇಳಿದ್ದಾರಾ? ಇಲ್ಲ ಕಾಂಗ್ರೆಸ್ ಶಾಸಕರು ಅಂದಿದ್ದಾರೆ. ನೋಡಿ ಅವರು ನನ್ನ ಕ್ಷೇತ್ರವರು ಅಲ್ಲ. ಕೆಪಿಟಿಸಿಎಲ್ ತಾಳಗುಪ್ಪದಲ್ಲಿ ಇರುವುದಂತೆ. ಅವರ ಮೇಲೆ ಹಲವಾರು ಕೇಸುಗಳು ಇರುವುದರಿಂದ ತಾನು ಬಚಾವಾಗೋದಕ್ಕೆ ಯಾರೋ ಮೇಲೆ ಒತ್ತಡ ಹೇರೋದಕ್ಕೆ ಹಾಗೆ ಮಾಡಿರಬಹುದು ಎಂದರು.

ನನಗೆ ಆತ ಪೋನು ಮಾಡಿಲ್ಲ. ನನಗೆ ಅವರು ಪರಿಚಯನೂ ಇಲ್ಲ. ನನಗೆ ಅವರು ಗೊತ್ತೂ ಇಲ್ಲ. ಸುಮ್ಮನೆ ಆಪಾದನೆ ಮಾಡಿದ್ದಾನೆ. ಕೇಸ್ ಆದ ನಂತ್ರ ಕೋರ್ಟಲ್ಲಿ ಏನಿದೆ ಎಂಬುದನ್ನು ನೋಡಿಕೊಂಡು ಕಾನೂನುನಿಡಿ ಕಾರ್ಯಪ್ರವೃತ್ತನಾಗುತ್ತೇನೆ. ನಾನು ಕೋರ್ಟ್ ನಲ್ಲಿ ಏನಾಗುತ್ತೋ ತಿಳಿದುಕೊಂಡು ಮುಂದಿನ ನಡೆಯನ್ನು ತೋರಲಿದ್ದೇನೆ ಎಂದು ಹೇಳಿದರು.

ನೀವು ಈಗಾಗಲೇ ಮಾನನಷ್ಟ ಮೊಕದ್ದಮ್ಮೆ ಹೂಡುವುದಾಗಿ ಹೇಳಿಕೆ ನೀಡಿದ್ದೀರಿ ಎಂಬ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದಂತ ಅವರು, ಕೋರ್ಟ್ ನಲ್ಲಿ ಏನಾಗುತ್ತೋ ನೋಡಿಕೊಂಡು ಮುಂದುವರೆಯುತ್ತೇನೆ. ನಮ್ಮ ವಕೀಲರೊಂದಿಗೆ ಆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ನಮ್ಮ ಕ್ಷೇತ್ರದವನಲ್ಲ. ಸೊರಬ ಕ್ಷೇತ್ರದ ತಾಳಗುಪ್ಪದವನು. ಆ ಹುಡುಗಿ ವಿಚಾರದಲ್ಲಿ ಪ್ರಕರಣವಿದೆ ಅದು ಸೊರಬ ಕ್ಷೇತ್ರ ವ್ಯಾಪ್ತಿಯದ್ದಾಗಿದೆ. ನನ್ನ ವಿರುದ್ಧ ಸುಮ್ಮನೇ ಆಪಾದನೆ ಮಾಡಿದ್ದಾನೆ ಅಥವಾ ಯಾರಾದರೂ ಬೇರೆಯವರು ಮಾಡಿರೋದಕ್ಕೆ ಶಾಸಕರು, ಶಾಸಕರ ಕಡೆಯವರು ಅಂದಿದ್ದಾನೋ ಗೊತ್ತಿಲ್ಲ. ನನಗೇನು ಆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದರು.

ಇವತ್ತು ನಮ್ಮ ಡಿವೈಎಸ್ಪಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಅವನ ಮೇಲೆ ಏನು ಕೇಸಿದೆ. ಹುಡುಗಿ ಮನೆಗೆ ಹೋಗಿ ಗಾಂಜಾ ಬಿಸಾಕಿ ಸಿಕ್ಕಿಹಾಕಿಕೊಂಡಿದ್ದಾನೆ. ಇದೆಲ್ಲ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಅದೇನೋ ನನಗೆ ಗೊತ್ತಿಲ್ಲ. ಅದು ಜುಲೈ.22ರಂದು ಆಗಿರುವಂತ ಘಟನೆಯಾಗಿದೆ. ಜುಲೈ.22ರಲ್ಲಿ ನಾನು ಇರಲೇ ಇಲ್ಲ. ನಾನು ವಿದೇಶಿ ಪ್ರವಾಸದಲ್ಲಿದ್ದೆ. ಜುಲೈ.11ರಿಂದ 29ರವರೆಗೆ ವಿದೇಶಿ ಪ್ರವಾಸದಲ್ಲಿ ಇದ್ದುದ್ದರಿಂದ ಅವನು ಯಾರು? ಏನು ಅಂತನೂ ಗೊತ್ತಿಲ್ಲ. ಒಟ್ಟು ಶಾಸಕ ಅಂತ ಹೇಳಿದ್ದಾನಂತೆ ಎಂದು ಸ್ಪಷ್ಟ ಪಡಿಸಿದರು.

ನಾನು ಅವರೊಂದಿಗೆ ಮಾತನಾಡಿಲ್ಲ. ನನಗೆ ಆತ ಪೋನ್ ಕೂಡ ಮಾಡಿಲ್ಲ. ಶಾಸಕರು ಅಂದ್ರೆ ಸಾಗರ, ಸೊರಬ ಎರಡು ಕ್ಷೇತ್ರದವರು ಆಗುತ್ತಾರೆ. ಅವರು ಯಾರ ಬಗ್ಗೆ ಆರೋಪ ಮಾಡಿದ್ದಾರೋ ಗೊತ್ತಿಲ್ಲ. ಆತನ ಬಳಿಯಲ್ಲಿ ಏನಾದ್ರೂ ಸಾಕ್ಷಿ ಇದ್ದರೇ ತಂದು ಕೊಡಲಿ. ನನ್ನ ವಿರುದ್ಧದ ಆರೋಪ ಸಾಬೀತಾದ್ರೇ ನಾನು ರಾಜಕೀಯ ನಿವೃತ್ತಿಯನ್ನೇ ಆಗುತ್ತೇನೆ ಅಂತ ಸವಾಲ್ ಹಾಕಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

16 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

22 hours ago