ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು
ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ.
ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್ ಜೈಲಿನಿಂದ ಎರಡು ಪ್ರತ್ಯೇಕ ಫೋನ್ ನಂಬರ್ನಿಂದ ಕರೆ ಮಾಡಿ, ಬಸವರನ್ನ ಮುಗಿಸುವ ಡೀಲ್ ನಡೆದಿರುವ ಬಗ್ಗೆ ಹೇಳಿದ್ದಾನೆ.ಇದನ್ನ ಕೇಳಿಸಿಕೊಂಡ ವ್ಯಕ್ತಿಯು ಪೊಲೀಸರಿಗೆ ದೂರು ನೀಡಿದ್ದಾರೆ.
ಮುಬ್ಬು ಹೇಳಿದಂತೆ ಜೈಲಿನಿಂದಲೇ ಡಿಚ್ಚಿ ಮುಬಾರಕ್ ಬಸವನ ಹತ್ಯೆಗೆ ಸ್ಕೆಚ್ ಹಾಕಿ ಸೀಗೆಬಾಗಿ ನಿವಾಸಿ ಟಿಪ್ಪುಗೆ ಡೀಲ್ ಕೊಟ್ಟಿದ್ದಾನೆ. ಗಾಂದಿ ಸರ್ಕಲ್ನಲ್ಲಿ ಬಸವನನ್ನ ಹೊಡೆದು ಹಾಕಿ ಎಂದು ಟಿಪ್ಪು ಆಂಡ್ ಟೀಂಗೆ ಹೇಳಿದ್ದ ಎಂದು ಮುಬ್ಬು ತಿಳಿಸಿದ್ದಾಗಿ ದೂರುದಾರರು ಹೇಳಿದ ಪ್ರಕಾರ ಎಫ್ಐಆರ್ ದಾಖಲಾಗಿದೆ.
ಇಷ್ಟೆ ಅಲ್ಲದೆ ಕಳೇದ 17 ತಾರೀಖು ರಂಗಪ್ಪ ಸರ್ಕಲ್ ಬಳಿ ಸಿಕ್ಕ ಟಿಪ್ಪು ಬಾರ್ವೊಂದರಲ್ಲಿ ಕುಳಿತು ಡಿಚ್ಚಿ ಮುಬಾರಕ್ ಡೀಲ್ ಕೊಟ್ಟಿದ್ದು, ಅದರಂತೆ ಚಾಕು ತಂದಿದ್ದೇನೆ ಎಂದು ಮುಬ್ಬುಗೆ ತೋರಿಸಿರುವ ಬಗ್ಗೆ ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಒಟ್ಟಾರೆ ಕೊಲೆಗೆ ಸ್ಕೆಚ್, ಅಕ್ರಮ ಕೂಟು, ಸಂಚು ರೂಪಿಸಿದ ಆರೋಪ ಸೇರಿದಂತೆ ಬಿಎನ್ಎಸ್ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply