ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, ” ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್‌ ಬೀಟ್‌ ಆಯಪ್ ಮೂಲಕ ತಿಳಿದುಬಂದಿದೆ. ಕಳೆದ ಎಂಟು ತಿಂಗಳಿನಿಂದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಅವರ ಸರ್ಕಲ್‌ ನಲ್ಲಿ ಇರುವ ಸರ್ಕಾರಿ ಜಮೀನು ಎಷ್ಟಿವೆ? ಎಂದು ಲ್ಯಾಂಡ್‌ ಬೀಟ್ ಆಯಪ್ ನಲ್ಲಿ ಅಪ್ಲೋಡ್‌ ಮಾಡಲು ಹೇಳಿದ್ದೆವು. ಅದು ಅಪ್ಲೋಡ್‌ ಆದ ಮೇಲೆ ಈ ಲೆಕ್ಕ ಸಿಕ್ಕಿವೆ. ಈಗ ನಮ್ಮ ಬಳಿ ಜಿಲ್ಲಾವಾರು, ತಾಲೂಕವಾರು ಹಾಗೂ ಗ್ರಾಮವಾರು ಸರ್ವೇ ನಂಬರ್- ಲೊಕೇಷನ್‌ ಮತ್ತು ವಿಸ್ತೀಣದ ಮಾಹಿತಿ ಲಭ್ಯವಾಗಿದೆ” ಎಂದರು

ಮೊದಲ ಹಂತದ ಕೆಲಸ ಮುಕ್ತಾಯವಾಗಿದ್ದು, ಎರಡನೇ ಹಂತದಲ್ಲಿ ಮಾರ್ಚ್‌ ತಿಂಗಳಿನಿಂದ 14 ಲಕ್ಷ ಸರ್ವೇ ನಂಬರ್‌ಗೆ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಖುದ್ದು ಬೀಟ್‌ ಮಾಡಿಸಿದ್ದೇವೆ. 13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆಯಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ ಶೇ.90 ರಷ್ಟು ಜಾಗ ಸ್ಪಾಟ್‌ ವಿಸಿಟ್‌ ಆಗಿದೆ, ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್‌ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಒತ್ತುವರಿಯನ್ನೂ ತಹಶೀಲ್ದಾರ್‌ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 hour ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

6 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

7 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

7 hours ago