ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು
ಹೊಸನಗರ: ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ.
ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು ಅರಣ್ಯದಲ್ಲಿ ಎರಡು ಎಕರೆ ಹಾಗೂ ಹಿರೇಮೈತಿ ಗ್ರಾಮದ ಸ.ನಂ.ಒಂದರ ಹರಿದ್ರಾವತಿ ರಾಜ್ಯ ಅರಣ್ಯ ಪ್ರದೇಶದ ಎರಡು ಎಕರೆ ಅರಣ್ಯ ಭೂ ಪ್ರದೇಶದ ಒತ್ತುವರಿ ತೆರವುಗೊಳಿಸಿ ಸಸಿ ನೆಟ್ಟು ಸಿಬ್ಬಂದಿಗಳು ಹಸಿರೀಕರಣ ಮಾಡಿದ್ದಾರೆ.
ಒಟ್ಟಾರೆ ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಲಾಗಿದೆ.ರಾಜ್ಯ ಸರ್ಕಾರ ಅರಣ್ಯ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಲು ಸೂಚಿಸಿದ ಬೆನ್ನಲ್ಲೆ ತೆರವು ಕಾರ್ಯವನ್ನು ಇಲಾಖೆ ಚುರುಕಿಗೊಳಿಸಿದೆ.
ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಒತ್ತುವರಿ ತೆರವು ಕಾರ್ಯ ನಡೆದಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…