ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ.
ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಟಿ ಹೆಚ್ ಓ ಅನಿಕೇತನ್ ” ಮಾತ್ರೆಗಳನ್ನು ಊಟದ ಮೊದಲೇ ಸೇವನೆ ಹಾಗೂ ಗ್ಯಾಸ್ಟ್ರಿಕ್ ಇರುವವರಿಗೆ ಈ ಸಮಸ್ಯೆ ಕಾಡುವುದು ಸಹಜ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಈ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಅದೇನೇ ಇರಲಿ ವಿದ್ಯಾರ್ಥಿಗಳು ಕೂಡ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವುದು ಹಾಗೂ ಕಾಲೇಜು ಆಡಳಿತ ಮಂಡಳಿ ಆಗಲಿ ಅಥವಾ ಹಾಸ್ಟೆಲ್ ನಲ್ಲೆ ಆಗಲಿ ಇದರ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಒಳ್ಳೆಯದು ಎಂಬ ಮಾತು ಕೇಳಿ ಬರುತ್ತಿದೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…