ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ಕುಪಿತಗೊಂಡ ದರೋಡೆಕೋರರು ಅಜ್ಜಿ ಮೇಲೆ ದೊಣ್ಣೆಯಿಂದ ದಾಳಿ ನಡೆಸಿ, ಹತ್ಯೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.

ಅಕ್ಕ-ಪಕ್ಕದ ಗ್ರಾಮಸ್ಥರು ಸಂಜೆ ನೋಡಿದಾಗ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಕುಂಸಿ ಪೊಲೀಸ್ ಠಾಣೆಗೆ ಕೊಲೆಯ ಕುರಿತು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಅಜ್ಜಿಗೆ ಮೂವರು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರ ಇದ್ದಾನೆ. ಮೃತ ಅಜ್ಜಿ, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದು, ಕಳೆದ ಆರು ತಿಂಗಳ ಹಿಂದೆ ಅಜ್ಜಿ ಮನೆಯಲ್ಲಿದ್ದ 50 ಸಾವಿರ ರೂಪಾಯಿ ಕಳ್ಳತನವಾಗಿತ್ತು. ಇದರ ನಂತರ ಹಣಕ್ಕಾಗಿ ಅಜ್ಜಿಯನ್ನೇ ಮರ್ಡರ್ ಮಾಡಿ ಅವರು ಎಸ್ಕೇಪ್ ಆಗಿದ್ದಾರೆ. ಗ್ರಾಮಸ್ಥರು ಈ ಕೊಲೆ ಪ್ರಕರಣದಿಂದ ಬೆಚ್ಚಿಬಿದ್ದಿದ್ದಾರೆ.

ಅಜ್ಜಿ ಕೊಲೆ ಪ್ರಕರಣದಿಂದ ಇಡೀ ಗ್ರಾಮಸ್ಥರೆಲ್ಲರೂ ಬೆಚ್ಚಿಬಿದ್ದಿದ್ದಾರೆ. ಬೆಳ್ಳಂ ಬೆಳಗ್ಗೆ ಒಂಟಿ ಮನೆಗೆ ನುಗ್ಗಿ ದರೋಡೆಕೊರರು ಕೇವಲ 15 ಸಾವಿರ ಹಣಕ್ಕಾಗಿ ಅಜ್ಜಿಯ ಮರ್ಡರ್ ಮಾಡಿದ್ದಾರೆ. ಅಜ್ಜಿಯನ್ನು ಗಮನಿಸಿದ ದರೋಡೆಕೋರರು ಪ್ಲ್ಯಾನ್ ಮಾಡಿ ಮರ್ಡರ್ ಮಾಡಿದ್ದಾರೆ. ಅಜ್ಜಿ ಬಳಿ ಇದ್ದ 15 ಸಾವಿರ ನಗದು ದೋಚಿದ್ದಾರೆ. ಅಜ್ಜಿ ಮನೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಎರಡು ಸಾವಿರ ಹಣ ಮತ್ತು ಎರಡು ಚೀಲ ತೆಂಗಿನಕಾಯಿ ಕಳ್ಳತನವಾಗಿತ್ತು. ಒಂಟಿ ಅಜ್ಜಿ ಮನೆಯನ್ನೇ ಕಳ್ಳರು ದರೋಡೆಕೋರರು ಟಾರ್ಗೇಟ್ ಮಾಡಿದ್ದರು.

ಈ ಕಳ್ಳತನ ಕುರಿತು ಅಜ್ಜಿಯು ದೂರು ನೀಡಿರಲಿಲ್ಲ. ಈ ಘಟನೆ ನಡೆದು ಎರಡು ದಿನಗಳ ಬಳಿಕ ಅಜ್ಜಿ ಮರ್ಡರ್ ಆಗಿದೆ. ಹಾಲಿನ ಸಬ್ಸಿಡಿ ಹಣ ಅಜ್ಜಿ ಖಾತೆಗೆ ಜಮಾ ಆಗಿತ್ತು. ಈ ಸಬ್ಸಿಡಿ 15 ಸಾವಿರ ರೂಪಾಯಿ ಹಣವನ್ನು ಹತ್ತಿರದ ಸಿರಿಗೆರೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ತೆಗೆದುಕೊಂಡು ಹೋಗಿದ್ದಳು. ಈ ಹಣ ತೆಗೆದುಕೊಂಡು ಹೋಗಿರುವುದು ನೋಡಿದ ದರೋಡೆಕೋರರು ಅಜ್ಜಿಯ ಮನೆಗೆ ನುಗ್ಗಿ ಕೊಲೆ ಮಾಡಿದ್ದರು. ಯಾರೋ ಪರಿಚಯಸ್ಥರೇ ಅಜ್ಜಿಯ ಕೊಲೆ ಮಾಡಿರುವ ಅನುಮಾನ ಪೊಲೀಸರಿಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಅಜ್ಜಿಯ ಕೊಲೆ ಪ್ರಕರಣದ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಆದಷ್ಟು ಬೇಗ ಹಂತಕರನ್ನು ಪೊಲೀಸರು ಪತ್ತೆ ಮಾಡುವ ಮೂಲಕ ಗ್ರಾಮಸ್ಥರ ಆಂತಕವನ್ನು ದೂರ ಮಾಡಬೇಕಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago