ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್
ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.
ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ.
ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಸದಾಶಿವ ಅವರು ಶನಿವಾರದಂದು (ಆ.31) ವಯೋನಿವೃತ್ತಿ ಹೊಂದಿದ ಪ್ರಯುಕ್ತ ಹೊಸನಗರ ಕಂದಾಯ ಇಲಾಖೆಯ ವತಿಯಿಂದ ಬೀಳ್ಕೊಡಲಾಯಿತು.
ಸದಾಶಿವ ರವರ ವಯೋನಿವೃತ್ತಿ ಪ್ರಯುಕ್ತ ತಾಲೂಕ್ ಕಛೇರಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ನಂತರದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸ್ವತಃ ತಾವೇ ಸರ್ಕಾರಿ ವಾಹನದಲ್ಲಿ ಸದಾಶಿವ ಅವರನ್ನು ಮನೆಗೆ ತಲುಪಿಸಿ ಅವರಿಗೆ ವಿಶೇಷವಾಗಿ ಬೀಳ್ಕೊಟ್ಟರು.
ಉನ್ನತ ಅಧಿಕಾರಿ ಎನ್ನುವ ಅಹಂ ಇಲ್ಲದೇ ತಹಶೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಸಿಬ್ಬಂದಿಯನ್ನು ಬೀಳ್ಕೊಟ್ಟ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯ್ತು…..
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…