ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict
ಶಿವಮೊಗ್ಗ, ಆ.14,: ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ.
ದೂರುದಾರರಾದ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ ಶಾಖೆ, ಶಂಕರ ವಲಯ, ಶಿವಮೊಗ್ಗ ಇವರು ದೂರು ನೀಡಿದ ಅನ್ವಯ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಈ ಪ್ರಕರಣವನ್ನು ಎಲ್ಜಿಸಿ(ಸಿ) ಸಂಖ್ಯೆ 1726/2019 ಎಂದು ದಾಖಲಿಸಿಕೊಂಡು ಸಂಪೂರ್ಣ ಸಾಕ್ಷö್ಯ ವಿಚಾರಣೆಯನ್ನು ನಡೆಸಿದ ನಂತರ ಆರೋಪಿಯು ಅರಣ್ಯ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10,000/- ದಂಡವನ್ನು ವಿಧಿಸಿ, ದಂಡ ಪಾವತಿಸಲು ತಪ್ಪಿದಲ್ಲಿ 03 ತಿಂಗಳ ಸಾದಾ ಶಿಕ್ಷೆಯನ್ನು 02ನೇ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ ಮತ್ತು ಕಂದಾಯ ಸದಸ್ಯರಾದ ಕೆ.ಹೆಚ್.ಅಶ್ವತ್ಥ ನಾರಾಯಣಗೌಡ ಇವರು ಇದ್ದ ಪೀಠವು ದಿ: 11-07-2024 ರಂದು ತೀರ್ಪು ನೀಡಿರುತ್ತದೆ.
ಆರೋಪಿತರು ಒತ್ತುವರಿ ಮಾಡಿಕೊಂಡ ಅರಣ್ಯ ಜಮೀನನ್ನು ಕೂಡಲೇ ತೆರವುಗೊಳಿಸುವಂತೆ ಆದೇಶಿಸಿ, 60 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಉಪ ವಲಯ ಅರಣ್ಯಾಧಿಕಾರಿ, ಗೆಜ್ಜೇನಹಳ್ಳಿ, ಶಾಖೆ, ಶಂಕರ ವಲಯ ಇವರಿಗೆ ನಿರ್ದೇಶಿಸಿ ತೀರ್ಪನ್ನು ನೀಡಿರುತ್ತದೆ.
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…