ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ
ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.
ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ.
ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು ಜಮೀನಿದ್ದು, ಕೃಷಿಗಾಗಿ ಧರ್ಮಸ್ಥಳ ಸಂಘ, ನಗರ ನೀಲಕಂಠೇಶ್ವರ ಸಹಕಾರ ಸಂಘ, ಜಯನಗರ ಉಜ್ಜೀವನ್ ಫೈನಾನ್ಸ್, ರಿಪ್ಪನ್ ಪೇಟೆಯ ಚೈತನ್ಯ ಗ್ರಾಮೀಣ ಬ್ಯಾಂಕ್, ಮೂಕಾಂಬಿಕ ಸ್ವಸಹಾಯ ಸಂಘ ಸೇರಿದಂತೆ, ತನ್ನ ಹಾಗು ಪತ್ನಿ ಹೆಸರಲ್ಲಿ ರೂ 6.5 ಲಕ್ಷ ಹಣ ಸಾಲ ಪಡೆದಿದ್ದಾನೆ. ಕೃಷಿಯಲ್ಲಿ ಹೆಚ್ಚಿನ ಆದಾಯ ಬಾರದ ಕಾರಣ ಸಾಲಬಾಧೆಗೆ ತುತ್ತಾಗಿ ಕೊನೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಪುತ್ರ ಅಮಿತ್ ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ ಪ್ರಕರಣ ದಾಖಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply