ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ
ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.
ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ.
ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು ಜಮೀನಿದ್ದು, ಕೃಷಿಗಾಗಿ ಧರ್ಮಸ್ಥಳ ಸಂಘ, ನಗರ ನೀಲಕಂಠೇಶ್ವರ ಸಹಕಾರ ಸಂಘ, ಜಯನಗರ ಉಜ್ಜೀವನ್ ಫೈನಾನ್ಸ್, ರಿಪ್ಪನ್ ಪೇಟೆಯ ಚೈತನ್ಯ ಗ್ರಾಮೀಣ ಬ್ಯಾಂಕ್, ಮೂಕಾಂಬಿಕ ಸ್ವಸಹಾಯ ಸಂಘ ಸೇರಿದಂತೆ, ತನ್ನ ಹಾಗು ಪತ್ನಿ ಹೆಸರಲ್ಲಿ ರೂ 6.5 ಲಕ್ಷ ಹಣ ಸಾಲ ಪಡೆದಿದ್ದಾನೆ. ಕೃಷಿಯಲ್ಲಿ ಹೆಚ್ಚಿನ ಆದಾಯ ಬಾರದ ಕಾರಣ ಸಾಲಬಾಧೆಗೆ ತುತ್ತಾಗಿ ಕೊನೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಪುತ್ರ ಅಮಿತ್ ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ ಪ್ರಕರಣ ದಾಖಲಿಸಿದ್ದಾರೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…