ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!
ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ.
ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ.
ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ತಮ್ಮ ಮೇಲೆ ಹಲ್ಲೆಯ ಆತಂಕದಿಂದ ಸತೀಶ್ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಸಂಬಂಧ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಮೊಟ್ಟೆ ಸತೀಶ್ ಮೇಲೆ ಜಮೀನು ವ್ಯಾಜ್ಯದ ಸಲುವಾಗಿ ಹಲ್ಲೆ ನಡೆದಿದೆ. ಜಮೀನು ಖರೀದಿಯ ವಿಚಾರಕ್ಕೆ ಸತ್ಯನಾರಾಯಣ ರಾಜು ವ್ಯಾಜ್ಯ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ರೌಡಿ ಎಲಿಮೆಂಟ್ಸ್ ಕಂಡುಬಂದಿಲ್ಲ ಎಂದಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…