ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್ಪಿ ಹಾಜರಾಗಿದ್ದರು.
ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು.
“ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್ ಅಧಿಕಾರಿ ಜೊತೆಗೂಡಿ ತಾನು ವಿವಾಹವಾಗಬೇಕಿದ್ದ ಯುವತಿಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಮತ್ತು ಶಾಂತಕುಮಾರ ಸ್ವಾಮಿ ನಡುವಿನ ಮಾತುಕತೆಯ ಏಳೆಂಟು ಆಡಿಯೊಗಳು ಲಭ್ಯವಾಗಿವೆ. ಹೀಗಾಗಿ, ಒಪ್ಪಂದ ಮುರಿದು ಬಿದ್ದಿತ್ತು” ಎಂದರು.
“ಶಾಂತಕುಮಾರ ಸ್ವಾಮಿಗೆ ಯಾವುದೇ ರೀತಿಯಲ್ಲೂ ಪೊಲೀಸರು ಸೇರಿದಂತೆ ಯಾರೂ ಕಿರುಕುಳ ನೀಡಿಲ್ಲ. ಆತನನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ದಾಗ ಹಾಸಿಗೆಯಿಂದ ಕೆಳಗೆ ಉದ್ದೇಶಪೂರ್ವಕವಾಗಿ ಬಿದ್ದು ರಾದ್ಧಾಂತ ಸೃಷ್ಟಿಸಿದ್ದಾರೆ. ಇದೆಲ್ಲವನ್ನೂ ವಿಡಿಯೋ ಮಾಡಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು.
ಇದನ್ನು ಆಲಿಸಿದ ಪೀಠವು ಶಾಂತಕುಮಾರ ಸ್ವಾಮಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ನಿಮಗೆ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ನೀವು ಅರ್ಜಿ ಸಲ್ಲಿಸಿದರೆ ಸೂಕ್ತ ಆದೇಶ ಮಾಡಬಹುದು. ಮೌಖಿಕವಾಗಿ ಏನೇ ಹೇಳಿದರೂ ಅದಕ್ಕೆ ಮಾನ್ಯತೆ ಇರುವುದಿಲ್ಲ ಎಂದರು.
ನಿನ್ನೆ ಏಕಾಏಕಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಶಾಂತಕುಮಾರ ಸ್ವಾಮಿ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಪೊಲೀಸರು ಕಿರುಕುಳ ನೀಡುತ್ತಿದ್ದು, ನಾನು ನ್ಯಾಯಾಲಯ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ ಎಂದು ಪೀಠಕ್ಕೆ ಮೊರೆ ಇಟ್ಟಿದ್ದರು. ಘಟನೆಯ ಮಾಹಿತಿ ಪಡೆದಿದ್ದ ನ್ಯಾಯಾಲಯವು ವಾಸ್ತವಿಕ ವರದಿ ಸಲ್ಲಿಸುವಂತೆ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಗದೀಶ್ ಅವರಿಗೆ ಸೂಚಿಸಿತ್ತು.
ಶಾಂತಕುಮಾರ ಸ್ವಾಮಿ ಅವರು ಹೇಳಿರುವುದು ಸತ್ಯವಾಗಿದ್ದರೆ ಡಿವೈಎಸ್ಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತ್ತು. ಶಾಂತಕುಮಾರ ಸ್ವಾಮಿ ಹೇಳಿರುವುದು ಸುಳ್ಳಾದರೆ ಆತ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತ್ತು.
Highcourt – aspp clarification about mla and dysp opposite allegations
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…