ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು

ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.

ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ ನಾಗರಾಜ್ ಹಾಗೂ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಸದಸ್ಯೆ ಕೃಷ್ಣವೇಣಿ ಸ್ಪರ್ಧಿಸಿದ್ದರು. ಚಂದ್ರಕಲಾ ನಾಗರಾಜ್ ಪರವಾಗಿ 6 ಹಾಗೂ ಕೃಷ್ಣವೇಣಿ ಪರವಾಗಿ 3 ಮತಗಳು ಚಲಾವಣೆಗೊಂಡಿತು. ಒಟ್ಟು 11 ಸದಸ್ಯರ ಪೈಕಿ ಬಿಜೆಪಿಯ ಗುಲಾಬಿ ಮರಿಯಪ್ಪ, ಗುರುರಾಜ್ ಹಾಗೂ ಹಾಲಗದ್ದೆ ಉಮೇಶ್ ಚುನಾವಣೆಯಲ್ಲಿ ಭಾಗವಹಿಸಲಿಲ್ಲ. ಕಾಂಗ್ರೆಸ್ ಪಕ್ಷದ 5 ಸದಸ್ಯರು ಸೇರಿದಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ನಾಗರಾಜ ಪರವಾಗಿ ಮತ ಚಲಾಯಿಸಿದರು.

ಚುನಾವಣಾಧಿಕಾರಿ ತಹಸೀಲ್ದಾರ್ ಎಚ್.ಜೆ.ರಶ್ಮಿ ಅವರು ಅಧ್ಯಕ್ಷ ಸ್ಥಾನಕ್ಕೆ ನಾಗಪ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ನಾಗರಾಜ್ ಅವರು ಆಯ್ಕೆಯಾಗಿರುವುದನ್ನು ಘೋಷಿಸಿದರು.

ಶಾಸಕ ಬೇಳೂರು ಗೋಪಾಲಕೃಷ್ಣಕೃಷ್ಣ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ.ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಈ ಚುನಾವಣಾ ತಂತ್ರರೂಪಿಸಿ ತಮ್ಮ ಅಭ್ಯರ್ಥಿಗಳ ಗೆಲುವು ಸಾಧಿಸುವಂತೆ ಕಾಯ್ದುಕೊಂಡರು.

ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ನಮ್ಮ ಪಕ್ಷದ ಅಭ್ಯರ್ಥಿ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ. ಹೊಸನಗರ ಪಟ್ಟಣದ ಅಭಿವೃದ್ಧಿಗೆ ಪೂರಕವಾದ ಆಡಳಿತ ಸಿಗಲಿದೆ. ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ನಾವು ಆಮಿಷ ಒಡ್ಡಿದ್ದೇವೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ಅದು ಸತ್ಯಕ್ಕೆ ದೂರವಾದದ್ದು. ಕಾಂಗ್ರೆಸ್ ಪಕ್ಷದ ಜನಪರ ಕಾಳಜಿಯ ಆಡಳಿತವನ್ನು ನೋಡಿ ಬಿಜೆಪಿ ಪಕ್ಷದ ಕೆಲ ಸದಸ್ಯರು ಪರೋಕ್ಷವಾಗಿ ಬೆಂಬಲಿಸಿದ್ದಾರೆ ಎಂದರು.

ಬಳಿಕ ಮಾತನಾಡಿದ ಶಾಸಕ ಬೇಳೂರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಭದ್ರ ನೆಲೆ ಕಂಡಿದೆ. ಇತ್ತೀಚಿನ ಡಿಸಿಸಿ ಬ್ಯಾಂಕ್, ಶಿಮುಲ್ ಹಾಗೂ ಕಾರ್ಗಲ್ ಪಟ್ಟಣ ಪಂಚಾಯತಿ ಚುನಾವಣೆಗಳೇ ಇದಕ್ಕೆ ಸಾಕ್ಷಿ ಎಂದರು.

ಹೊಸನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ತಾವು ಈಗಲೂ ಕಟಿಬದ್ದರಾಗಿದ್ದು ನೂತನ ಆಡಳಿತ ಸಮಿತಿ ಜೊತೆ ಚರ್ಚಿಸಿ ಪಟ್ಟಣ ಪಂಚಾಯತಿಯ ಸುಸಜ್ಜಿತ ನೂತನ ಕಟ್ಟಡ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಯಲ್ಲಿ ನೂತನ ಆಡಳಿತ ಸಮಿತಿಗೆ ನೈತಿಕ ಬೆಂಬಲ ನೀಡಲು ಸದಾಸಿದ್ದ ಇರುವುದಾಗಿ ತಿಳಿಸಿದರು.

ಪರಸ್ಪರ ಹೊಂದಾಣಿಕೆ ರಾಜಕಾರಣದಿಂದ ಮಾತ್ರವೇ ಪಕ್ಷ ಸಂಘಟನೆ ಸಾಧ್ಯ ಎಂಬುದನ್ನು ಈ ಗೆಲುವು ಪುಷ್ಠಿಕರಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ತಿಳಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್, ಕಾಂಗ್ರೆಸ್ ಜಿಲ್ಲಾ ಮುಖಂಡ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಜಿ.ಪಂ.ಮಾಜಿ ಸದಸ್ಯರಾದ ಅನಿತಾ ಕುಮಾರಿ, ಬಂಡಿ ರಾಮಚಂದ್ರ, ತಾಲೂಕು ಮಹಿಳಾ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಪ.ಪಂ.ಸದಸ್ಯರಾದ ಸಿಂಥಿಯಾ, ಶಾಹಿನಾ, ಅಶ್ವಿನಿ ಕುಮಾರ್, ಗುರುರಾಜ್, ಪ್ರಮುಖರಾದ ಹರತಾಳು ಸಾಕಮ್ಮ, ನೋರಾ ಮೆಟೆಲ್ಡಾ ಸಿಕ್ವೇರಾ, ರಾಧಿಕಾ ಶೆಟ್ಟಿ, ಗುರುರಾಜ್ ಕೆ.ಎಸ್, ಕಾರ್ಯದರ್ಶಿ ಸದಾಶಿವ, ಕರುಣಾಕರ ಶೆಟ್ಟಿ, ನಾಗೋಡಿ ವಿಶ್ವನಾಥ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಕಳೂರು ಕೃಷ್ಣಮೂರ್ತಿ ಸೇರಿದಂತೆ ಹಲವರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

2 hours ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

3 hours ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

1 day ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

1 day ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 day ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago