ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ.

ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ ದಾಸ್ತಾನು ಕೊಠಡಿಯ ಬಾಗಿಲು ತೆರೆದಾಗ ಬೃಹತ್ ಕಾಳಿಂಗ ಸರ್ಪ  ಕಾಣಿಸಿಕೊಂಡಿದೆ.ಕೂಡಲೇ ಮುಖ್ಯ ಶಿಕ್ಷಕರಿಗೆ ಕಾಳಿಂಗ ಸರ್ಪದ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಸೋಮವಾರವಾಗಿದ್ದರಿಂದ ಮಕ್ಕಳು ಕೂಡ ಶಾಲೆಗೆ ಆಗಮಿಸಿದ್ದರು, ಬೋಧನಾ ಕೊಠಡಿ ಹಾಗೂ ಬಿಸಿಯೂಟ ಕೊಠಡಿ ನಡುವೆ ಬಹಳಷ್ಟು ಅಂತರವಿರುವ ಕಾರಣ ಮಕ್ಕಳು ಅದೃಷ್ಟವಶಾತ್ ಬಿಸಿಯೂಟದ ಕೊಠಡಿಯ ಹತ್ತಿರ ಸುಳಿದಿರಲಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯಶಿಕ್ಷಕ ಸುಪ್ರಿತ್ ಡಿಸೋಜ ಕೊಠಡಿಯ ಬಾಗಿಲನ್ನು ಮುಚ್ಚಿ ಹಾವು ಶಾಲಾ ಆವರಣದತ್ತ ಬಾರದಂತೆ ಕೂಡಿಹಾಕಿ ಸ್ಥಳೀಯ ಅರಣ್ಯ ಇಲಾಖೆಯ ಮೂಲಕ ಅಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ ಅಜಯಗಿರಿ ರವರನ್ನು ಸಂಪರ್ಕಿಸಿದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಜಯ್ ಗಿರಿ ಹಾಗೂ ತಂಡದವರು ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ನಂತರ ಮಕ್ಕಳು ಮತ್ತು ಪೋಷಕರಿಗೆ ಕಾಳಿಂಗ ಸರ್ಪ ಕಂಡುಬಂದಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ನಗರ ವಲಯ ಅರಣ್ಯಾಧಿಕಾರಿ ಸಂತೋಷ್ ಮಲ್ಲನಗೌಡರ್ ಸೇರಿದಂತೆ ಇಲಾಖೆ ಸಿಬ್ಬಂದಿ ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

15 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

18 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago