Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ರಿಪ್ಪನ್ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ.
ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್ ತಕ್ಷಣ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ನಂತರದಲ್ಲಿ ತಮ್ಮ ತಂಡದೊಂದಿಗೆ ಸ್ಥಳಕ್ಕಾಗಮಿಸಿದ ಅಜಯ್ ಗಿರಿ ರವರು ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿ ಬಿಟ್ಟಿದ್ದಾರೆ.
ಸುಮಾರು ಹನ್ನೆರೆಡೂವರೆ ಅಡಿ ಉದ್ದವಿದ್ದ ಕಾಳಿಂಗ ಸರ್ಪ 6 ಕೆ ಜಿ 650 ಗ್ರಾಂ ನಷ್ಟು ತೂಕವಿತ್ತು.
ಬರುವೆ ಗ್ರಾಮದಲ್ಲಿ ಹಲವಾರು ದಿನಗಳಿಂದ ಓಡಾಡುತಿದ್ದ ಬೃಹತ್ ಕಾಳಿಂಗ ಸರ್ಪ ದಿಂದ ಹೆದರಿಕೊಂಡು ಓಡಾಡುತಿದ್ದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂಧರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಅನಿಲ್ , ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದವರು ಇದ್ದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…