Breaking
12 Jan 2026, Mon

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು.

ಆ ಮೂಲಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಮಟ್ಟದಲ್ಲಿ ಆರಂಭಿಸಿರುವ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಶುಕ್ರವಾರ ವಿಶಿಷ್ಟವಾಗಿ ಚಾಲನೆ ನೀಡಿದರು.

ಸಚಿವರು ನೀಡಿದ ಕೊಡುಗೆಯಲ್ಲಿ ಕಂಪ್ಯೂಟರ್, ಯುಪಿಎಸ್, ಸ್ನಾರ್ಟ್ ಕ್ಲಾಸ್, ಗ್ರಂಥಾಲಯಕ್ಕೆ ಪುಸ್ತಕಗಳು ಸೇರಿದಂತೆ ಪಠ್ಯ ಹಾಗೂ ಕ್ರೀಡೆಗೆ ಪೂರಕವಾದ ಪರಿಕರಗಳು ಒಳಗೊಂಡಿವೆ.

ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ ‘ನನ್ನ ಶಾಲೆ ನನ್ನ ಜವಾಬ್ದಾರಿ’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ಕಲಿತು ಉನ್ನತ ಹುದ್ದೆಯಲ್ಲಿ ಇರುವವರು, ಉದ್ಯಮಿಗಳು ಆ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಉನ್ನತ ಹುದ್ದೆ, ಉದ್ಯಮಿಗಳು ಮಾತ್ರವಲ್ಲ ಶಾಲೆಯ ಬಗ್ಗೆ ಪ್ರೀತಿ ಹೊಂದಿದವರು ಅಳಿಲು ಸೇವೆ ನೀಡಬಹುದು’ ಎಂದರು.

‘ ಸರ್ಕಾರಿ ಶಾಲೆಗಳು ಸಮುದಾಯದ ಆಸ್ತಿ. ಅಲ್ಲಿನ ಮಕ್ಕಳ ಬಗ್ಗೆ ಜನಸಾಮಾನ್ಯರಲ್ಲಿ ಕಾಳಜಿ ಹೆಚ್ಚಿಸಲು ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಕಾರ್ಯಕ್ರಮ ಆರಂಭಿಸಲಾಗಿದೆ. ದೇಣಿಗೆ ಕೊಡುವವರು, ಅಭಿವೃದ್ಧಿಗೆ ಕೈ ಜೋಡಿಸುವವರು ಆಯಾ ಶಾಲಾ ಆಡಳಿತವನ್ನು ಸಂಪರ್ಕಿಸಬಹುದು’ ಎಂದರು.

‘ಮಂಡ್ಯ ಜಿಲ್ಲೆ ಮಳವಳ್ಳಿ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ ₹ 6 ಕೋಟಿಗೂ ಹೆಚ್ಚು ಹಣ ದೇಣಿಗೆ ನೀಡಿ ಹಳೆಯ ವಿದ್ಯಾರ್ಥಿಗಳು ಸುಸಜ್ಜಿತ ಶಾಲಾ ಕಟ್ಟಡಗಳ ಕಟ್ಟಿಸಿಕೊಟ್ಟಿದ್ದಾರೆ. ಈ ಮಾದರಿ ಕಾರ್ಯ ಎಲ್ಲರಿಗೂ ಸ್ಫೂರ್ತಿ ಆಗಲಿ’ ಎಂದು ಆಶಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದ ಅರಂಭಿಸಿರುವ ಮಾಂಟೆಸ್ಸರಿ ತರಗತಿಗೆ ಸಾರ್ವಜನಿಕರಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಬರೀ 30 ದಿನಗಳಲ್ಲಿ 32 ಸಾವಿರಕ್ಕೂ ಹೆಚ್ಚು ಮಕ್ಕಳು ದಾಖಲಾತಿ ಆಗಿದ್ದಾರೆ. ಆ ಮಕ್ಕಳು ಎಲ್ ಕೆಜಿ, ಯುಕೆಜಿ ನಂತರ ಅಲ್ಲಿಯೇ ಶಿಕ್ಷಣ ಮುಂದುವರೆಸುವುದರಿಂದ ಸರ್ಕಾರಿ ಶಾಲೆಯ ಬಲವರ್ಧನೆಗೂ ನೆರವಾಗಲಿದೆ ಎಂದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version