ಎರಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹೊಸನಗರ ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ.
ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ.7) ನಡೆದಿತ್ತು.ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೂ ಮುನ್ನ ತಾಯಿ ವಾಣಿ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಾವಿ ಕಡೆಗೆ ಹೋಗುತ್ತಿರುವಾಗ ತನ್ನ ಅಮ್ಮ ಎಲ್ಲೋ ಕರೆದುಕೊಂಡು ಹೋಗುತಿದ್ದಾಳೆ ಎಂಬ ನಂಬಿಕೆಯಲ್ಲಿ ಎರಡು ಪುಟ್ಟ ಕಂದಮ್ಮಗಳು ಮುಂದೆ ಬರುವ ಸಾವಿನ ಅರಿವಿಲ್ಲದೇ ಅಮ್ಮನ ಟಾರ್ಚ್ ಬೆಳಕಿನಲ್ಲಿ ನಡೆಯುತ್ತಿರುವ ದೃಶ್ಯ ಮನಕಲುಕುವಂತಿದೆ..
ಸಿಸಿಟಿವಿ ದೃಶ್ಯಾವಳಿ…
ಬಾವಿ ಬಳಿ ಹೋದ ಕೆಲವೆ ಸೆಕೆಂಡುಗಳಲ್ಲಿ ಬಾಲಕ ಸಂಪದ ಅಮ್ಮಾ .. ಅಮ್ಮಾ.. ಅಮ್ಮಾ… ಎಂದು ಕೂಗುವುದು ಕೇಳಿಸುತ್ತದೆ ಇದು ಎಂತಹ ಕಲ್ಲು ಹೃದಯದವರು ಸಹ ಮರುಗುವಂತಿದೆ..
ಈ ಘಟನೆಯ ಬಗ್ಗೆ ಹೊಸನಗರದ ಹಿರಿಯ ಪತ್ರಕರ್ತ ರವಿ ಬಿದನೂರು ಬರೆಯುತ್ತಾ…
ಸಾವು ಅಂತಿಮವಲ್ಲ,ಸಾವೊಂದೇ ಕೊನೆಯಲ್ಲ.. ಆದರೂ ಯಾಕೆ ಈ ನಿರ್ಧಾರ , ಎರಡು ಮಕ್ಕಳನ್ನು ಹೆತ್ತು ಹೊತ್ತು ಸಲಹಿದ ನಿನಗೆ ಅದ್ಯಾವ ಖಿನ್ನತೆ , ಮಕ್ಕಳನ್ನು ಹೆರುವಾಗ ಅನುಭವಿಸಿದ ನೋವಿನ ಮುಂದೆ ಸಣ್ಣ ತಲೆನೋವು ನಿನ್ನನ್ನು ಇಹಲೋಕ ತ್ಯಜಿಸುವಂತೆ ಮಾಡಿತೆ..!!
ಆಯ್ತು ಅದು ನಿನ್ನ ನಿರ್ಧಾರ ,ಆದರೆ ಇನ್ನಷ್ಟೇ ಬದುಕಿ ಬಾಳಬೇಕಿದ್ದ ಆ ಮುದ್ದಾದ ಮಕ್ಕಳಿಗೆ ಯಾಕೆ ನೀನೆ ನೀಡಿದ ಈ ಘೋರ ಶಿಕ್ಷೆ..
ಶಿಕ್ಷೆಯೇ ನೀಡಿದ್ದರೆ ಎಷ್ಟು ಸರಿ.!ನೀನೇಕೆ ಸಾಯುವ ನಿರ್ಧಾರ ಮಾಡಿದೆಯೋ ಗೊತ್ತಿಲ್ಲ…
ಬದುಕು ನೋಡಬೇಕಾಗಿದ್ದ ಮಕ್ಕಳಿಗೆ ಪೂರ್ಣ ವಿರಾಮ ಹಾಕುವ ನಿರ್ಧಾರ ನಿನ್ನದಾಗಿದ್ದರೆ.! ಅದನ್ನು ನೀಡುವ ಅಧಿಕಾರ ನಿನಗೆ ಕೊಟ್ಟವರು ಯಾರು..?? ಅದಕ್ಕೆ ಕ್ಷಮೆ ಇಲ್ಲ ,,, ಕ್ಷಮೆ ಕೊಡೊದು ಇಲ್ಲ…
ಕ್ಷಮೆ ನಿನಗೆ ಬೇಕಾಗಿಯೂ ಇಲ್ಲ .. ಯಾಕೆಂದರೆ ಅವೆಲ್ಲಾವನ್ನು ನೀನು ಬಿಟ್ಟು ಹೋಗಿಯಾಗಿದೆ… ಈ ಸಾವು ನ್ಯಾಯವೇ..
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್