ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “

ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ ನಡೆಯುತ್ತಿದೆ.

ಗ್ರಾಮೀಣ ಪ್ರತಿಭೆಯನ್ನು ಸಶಕ್ತಗೊಳಿಸುವುದು: ಜವಾಹರ ನವೋದಯ ವಿದ್ಯಾಲಯಗಳು ಗ್ರಾಮೀಣ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಉತ್ತಮ ಗುಣಮಟ್ಟದ, ಉಚಿತ ಶಿಕ್ಷಣವನ್ನು ನೀಡಲು ಹೆಸರುವಾಸಿಯಾಗಿದೆ. ಭಾರತ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಈ ವಸತಿ ಶಾಲೆಗಳು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಅನುಕೂಲಕರ ವಾತಾವರಣವನ್ನು ಒದಗಿಸುತ್ತವೆ. ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿ ವೃತ್ತಿಪರರನ್ನು ಒಳಗೊಂಡ ಹಳೆಯ ವಿದ್ಯಾರ್ಥಿಗಳ ಜಾಲವು ಮುಂದಿನ ಪೀಳಿಗೆಗೆ ಈ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡಲು ಈಗ ಹೆಜ್ಜೆ ಹಾಕುತ್ತಿದೆ.

ನವೋದಯ ಪ್ರವೇಶ ಪರೀಕ್ಷೆ: ಈ ತರಬೇತಿ ಕಾರ್ಯಕ್ರಮಗಳು ಗಣಿತ, ಸಾಮಾನ್ಯ ಜ್ಞಾನ ಮತ್ತು ಭಾಷಾ ಕೌಶಲ್ಯಗಳಂತಹ ವಿಷಯಗಳ ಮೇಲೆ ಕೇಂದ್ರೀಕರಿಸುತ್ತವೆ, ಇದು ಪ್ರವೇಶ ಪರೀಕ್ಷೆಗೆ ನಿರ್ಣಾಯಕವಾಗಿದೆ. ತಮ್ಮ ಸ್ವಂತ ಅನುಭವಗಳು ಮತ್ತು ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ, ಪೂರ್ವ ವಿದ್ಯಾರ್ಥಿಗಳು ತಯಾರಿ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸಮರ್ಪಿತರಾಗಿದ್ದಾರೆ.

ಯಶಸ್ಸಿನ ಕಥೆ ಮತ್ತು ಸಾಧನೆಗಳು : ನವೋದಯ ಮತ್ತು ಮೊರಾರ್ಜಿ ಶಿಬಿರ 2021 ವರ್ಷದ ಕೋವಿಡ್ ಸಮಯದಲ್ಲಿ ಹುಂಚ ಕ್ಷೇತ್ರದಲ್ಲಿ ಪ್ರಾರಂಭಗೊಂಡಿತು. ಈ ಶಿಬಿರದಲ್ಲಿ ಪರೀಕ್ಷೆಗೆ ದಾಖಲಿಸಿದ ವಿದ್ಯಾರ್ಥಿಗಳಿಗೆ ನವೋದಯ ಮತ್ತು ಮೊರಾರ್ಜಿ ಶಾಲೆಯ ಪರಿಚಯ, ಆಯ್ಕೆ ಪ್ರಕ್ರಿಯೆ ಮಾಹಿತಿ, ಕೋಚಿಂಗ್, ಮಾದರಿ ಪರೀಕ್ಷೆ, ಕಲಿಕಾ ಸಾಮಗ್ರಿಗಳು, ಸಮಯ ನಿರ್ವಹಣೆ ಮತ್ತು ಇತರೆ ಉಪಯುಕ್ತ ಮಾಹಿತಿಗಳನ್ನು ಕೊಡಲಾಗುವುದು.

ಈ ಸಂಸ್ಥೆಯಿಂದ ಕಳೆದ ಮೂರು ವರ್ಷಗಳಿಂದ 209 ಮಕ್ಕಳು ಉಚಿತ ತರಬೇತಿ ಪಡೆದು, ಒಟ್ಟು 6 ಮಕ್ಕಳು ನವೋದಯ ಶಾಲೆಗೆ ಮತ್ತು 42 ಮಕ್ಕಳು ಮೊರಾರ್ಜಿ ವಸತಿ ಶಾಲೆಗಳಿಗೆ ತೇರ್ಗಡೆ ಆಗಿರುತ್ತಾರೆ. ಖುಷಿಯಾದ ವಿಚಾರ ಏನಂದರೆ… ಈ ಸಂಸ್ಥೆಯಿಂದ ಗ್ರಾಮೀಣ ಭಾಗದ ಮಕ್ಕಳು 1.68 ಕೋಟಿ ರೂಪಾಯಿ ಮೌಲ್ಯದ, ಶೈಕ್ಷಣಿಕ ಉಪಯೋಗ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಪಡೆದುಕೊಂಡಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಈ ಸಂಸ್ಥೆ ಹುಂಚ, ಕೋಣಂದೂರು ಮತ್ತು ಶಿಕಾರಿಪುರದ ನೆಲವಾಗಿಲು ಗ್ರಾಮಗಳಲ್ಲೂ ಕಾರ್ಯ ನಡೆಸುತ್ತಿದೆ. ತಮ್ಮ ಊರಿನ ಸಮಾನ ಮನಸ್ಕ ತಂಡದೊಂದಿಗೆ ಹತ್ತಿರದ ಸರ್ಕಾರಿ ಶಾಲೆಗಳಿಗೆ ಭೇಟಿಕೊಟ್ಟು, ನವೋದಯ ಪ್ರವೇಶ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ನವೋದಯ ಮತ್ತು ಮೊರಾರ್ಜಿ ಶಾಲೆಯ ಪರೀಕ್ಷೆಯ ಬಗ್ಗೆ ಮಾಹಿತಿಗಾಗಿ ಸಂಪರ್ಕಿಸಿ – ಪ್ರಕಾಶ್ ಜೋಯ್ಸ್ – 9980463013

ಪ್ರವೇಶ ಪ್ರಕ್ರಿಯೆ :

ಜವಾಹರ ನವೋದಯ ವಿದ್ಯಾಲಯ ಗಾಜನೂರು 2025-26ನೇ ಸಾಲಿಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಆನ್ ಲೈನ್ (ONLINE) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-09-2024
ಪರೀಕ್ಷೆಯ ದಿನಾಂಕ 18-01-2025
ಪರೀಕ್ಷೆಯ ಸಮಯ- ಬೆಳಿಗ್ಗೆ 11.30 ರಿಂದ 1.30 ರ ವರೆಗೆ

  1. ವಿದ್ಯಾರ್ಥಿಗಳು ಈಗಾಗಲೇ ಶೈಕ್ಷಣಿಕ ಸಾಲಿನಲ್ಲಿ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು 01-05-2013 ರಿಂದ 31-07-2015 ರೊಳಗೆ ಜನಿಸಿರುವ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  2. ವಿದ್ಯಾರ್ಥಿಯ ವ್ಯಾಸಂಗ ಮತ್ತು ಪೋಷಕರ ವಾಸಸ್ಥಳ ಶಿವಮೊಗ್ಗ ಜಿಲ್ಲೆ ಆಗಿರಬೇಕು.
    ಅರ್ಜಿ ಸಲ್ಲಿಸುವುದು ಹೇಗೆ?
  • ಅರ್ಜಿ ಸಲ್ಲಿಸಲು ನವೋದಯ ವಿದ್ಯಾಲಯ ಸಮಿತಿ ವೆಬೈಟ್ www.navodaya.gov.in ಅನ್ನು ನೋಡಬಹುದು
  • ಪಾಲಕರು ಅಂತರ್ಜಾಲ ಕೇಂದ್ರಗಳಿಗೆ ಹೋಗುವ ಮೊದಲು ಈ ಕೆಳಗೆ ಸೂಚಿಸಲಾದ ಪ್ರಮಾಣ ಪತ್ರಗಳನ್ನು ತಪ್ಪದೇ
    ತೆಗೆದುಕೊಂಡು ಹೋಗಬೇಕು
    ೧) ವೆಬ್ಸೈಟ್ ನಲ್ಲಿ ಲಭ್ಯವಿರುವ ವ್ಯಾಸಂಗ ಪ್ರಮಾಣ ಪತ್ರ (ಮುಖ್ಯೋಪಾಧ್ಯಾಯರಿಂದ ಭರ್ತಿಮಾಡಿರಬೇಕು)
    ೨) ಅಭ್ಯರ್ಥಿಯ ಭಾವಚಿತ್ರ
    ೫) ಪಾಲಕರ ಮೊಬೈಲ್ ಸಂಖ್ಯೆ
    ೩) ಅಭ್ಯರ್ಥಿಯ ಮತ್ತು ಪಾಲಕರ ಸಹಿ
    ೪) ಆಧಾರ ಕಾರ್ಡ್‌ ಪ್ರತಿ
    ೬) ಪಾಲಕರ ವಾಸಸ್ಥಳ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ದೂರವಾಣಿ ಸಂಖ್ಯೆ: 7411118875, 9731456665
ಸಂಪರ್ಕಿಸಬಹುದು.
ಪಾಲಕರು ಯಾವುದೇ ಅಂತರ್ಜಾಲ ಕೇಂದ್ರಗಳಲ್ಲಿ ತಮ್ಮ ಅರ್ಜಿಯನ್ನು ತುಂಬಬಹುದು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago