ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ.
ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುವ ಮೂಲಕ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಪ್ರಚಂಡ ಗೆಲುವಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಕ್ರೀಯವಾಗಿ ಪಾಲ್ಗೊಂಡಿದ್ದೆ ಆದರೆ ಈಗ ಕೆಲವು ಪಟ್ಟಭದ್ರ ಹಿತಾಸಕ್ತಿಯವರ ತೋಜೋವಧೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.
ನಾನು ನಮ್ಮ ಅಜ್ಜ ಮತ್ತು ತಂದೆಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದವರು. ಅವರ ದಾರಿಯಲ್ಲಿ ನಾನು ಪಕ್ಷ ನಿಷ್ಟೆಯೊಂದಿಗೆ ಹಿರಿಯರಾದ ಕಾಗೋಡು ತಿಮ್ಮಪ್ಪರವರ ಮತ್ತು ನಂತರದಲ್ಲಿ ಬೇಳೂರು ಗೋಪಾಲಕೃಷ್ಣರವರೊಂದಿಗೆ ಪಕ್ಷಕ್ಕಾಗಿ ದುಡಿದಿದ್ದೇನೆ, ಕಳೆದ ವರ್ಷ ನಡೆದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದೇ ಆದರೆ ಅವರು ಹಾಗೂ ರಿಪ್ಪನ್ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮತ್ತು ಇನ್ನಿತರರು ಪಕ್ಷದಲ್ಲಿ ನನ್ನ ಏಳಿಗೆಯನ್ನು ಸಹಿಸದೇ ನನ್ನ ವಿರುದ್ದ ಇಲ್ಲಸಲ್ಲದ ಮಾತುಗಳನ್ನಾಡಿ ನನ್ನ ಮನಸಿಗೆ ನೋವುಂಟು ಮಾಡುವುದರೊಂದಿಗೆ ಕ್ಷೇತ್ರದ ಶಾಸಕರಲ್ಲಿ ಸಹ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕಡೆಗಣಿಸುಂತೆ ಮಾಡಿದ್ದಾರೆ.
ಈ ಬಗ್ಗೆ ನಾನು ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಸಹ ಚರ್ಚಿಸಲು ಸಾಕಷ್ಟು ಪ್ರಯತ್ನಪಟ್ಟರು ಕೂಡಾ ನಮಗೆ ಆವಕಾಶ ನೀಡದ ಹಾಗೇ ಪಟ್ಟಣದ ಕೆಲವು ಕಾಂಗ್ರೆಸ್ ಮುಖಂಡರು ಪಿತೂರಿ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಬೇಸರಗೊಂಡು ನಾನು ನನ್ನ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಮಹಿಳಾ ಕಾರ್ಯಕರ್ತರು ಸ್ಥಳಿಯ ನಾಯಕರುಗಳ ನಡೆಗೆ ಬೇಸತ್ತು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಸಾಗರದ ಮಧುಮತಿ ಹಾಗೂ ಸೊರಬದ ರಾಜೇಶ್ವರಿ ಹಾಜರಿದ್ದರು.
Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…