Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ.

ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ ತಂಪು ಪಾನೀಯ , ಬ್ರೆಡ್ , ತಿಂಡಿ ತಿನಿಸುಗಳನ್ನು  ಹಾಗೂ ಸರಿಯಾದ ಸುರಕ್ಷತಾ ಮಾನದಂಡವಿಲ್ಲದ ದುಬೈ ಚಾಕಲೇಟ್ ನ್ನು ಮಾರಾಟ ಮಾಡುತ್ತಿರುವ ಆರೋಪದ ಹಿನ್ನಲೆಯಲ್ಲಿ ಇಂದು ಅಧಿಕಾರಿಗಳು ಪಟ್ಟಣದ ವಿವಿಧ ಮಾಲ್ , ಬೇಕರಿ ,ಹಾಗೂ ಅಂಗಡಿ ಹೋಟೇಲ್ ಗಳ ಮೇಲೆ ದಾಳಿ ನಡೆಸಿ ಶುಚಿತ್ವ, ಪರವಾನಗಿ, ಆಹಾರ ಭದ್ರತೆ ಕಾರಣಗಳಿಗಾಗಿ ಪರಿಶೀಲನೆ ನಡೆಸಿ ಹಲವು ಮಳಿಗೆಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ಈ ಸಂಧರ್ಭದಲ್ಲಿ ಮಾದ್ಯಮದವರೊಂದಿಗೆ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿ ಸದಾಶಿವ ರವರು ಮಾತನಾಡಿ ಹೋಟೆಲ್, ಬೇಕರಿ, ನೀರಿನ ವ್ಯಾಪಾರ, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಆಹಾರಕ್ಕೆ ಸಂಬಂಧಿಸಿದ ಉದ್ಯಮ ನಡೆಸುವವರು (ಆಹಾರೋದ್ಯಮ) ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ಪರವಾನಗಿ ಪಡೆಯ ಬೇಕಾಗಿರುವುದು ಕಡ್ಡಾಯವಾಗಿದೆ.

ಆಹಾರೋದ್ಯಮಕ್ಕೆ ಎಫ್ಎಸ್ಎಸ್ಎಐ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ, ಪೂರಕ ದಾಖಲಾತಿ ಒದಗಿಸಿದ ನಂತರ ಸಂಬಂಧಿತ ಬ್ಯಾಂಕ್ನಲ್ಲಿ ಶುಲ್ಕ ಪಾವತಿಸಿದರೆ 10 ದಿನದೊಳಗೆ ಪರವಾನಗಿ ಲಭ್ಯವಾಗುತ್ತದೆ. ಅಥವಾ ಶಿವಮೊಗ್ಗದ ಹಾಲ್ಕೊಳ ದಲ್ಲಿರುವ ನಮ್ಮ ಕಛೇರಿಗೆ ನೇರವಾಗಿ ಬಂದು ಪರವಾನಗಿಯನ್ನು ಪಡೆಯಬಹುದಾಗಿದೆ ಎಂದರು.

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಹಲವಾರು ಮಳಿಗೆಯವರು ಎಫ್ಎಸ್ಎಸ್ಎಐ(FSSAI) ಪರವಾನಗಿ ಪಡೆದಿಲ್ಲ ಅವರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು ಆ ನಂತರದಲ್ಲಿ ಪರವಾನಿಗೆ ಪಡೆಯದೇ ಇರುವ ಮಳಿಗೆಯವ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆಯ(fssai) ನೀಲಕಂಠ ರವರು ಹಾಗೂ ರಕ್ಷಣಾ ಇಲಾಖೆಯು ಖಾದರ್ ರವರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

15 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

17 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

24 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago