RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ

ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ.

ಗ್ರಾಮಸಭೆಯಲ್ಲಿ ಏನೇನಾಯ್ತು…!?

ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ ನಿಲುಗಡೆಗೆ ಶಾಶ್ವತ ಜಾಗ ನೀಡುವುದು ಸೇರಿದಂತೆ ಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ವಿವಿಧ ಬಡಾವಣೆಯ ಸಂಪರ್ಕ ರಸ್ತೆ ಮತ್ತು ಗ್ರಾಮಾಂತರ ಪ್ರದೇಶಗಳ ಮಣ್ಣಿನ ರಸ್ತೆಗಳು ಮಳೆ ನೀರಿನಿಂದ ಕೊಚ್ಚಿ ಹೋಗುವ ಮೂಲಕ ಕೆಸರು ಗದ್ದೆಯಂತಾಗಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳು, ವೃದ್ಧರು, ಅನಾರೋಗ್ಯ ಪೀಡಿತರು ನಿತ್ಯ ಗೃಹಪಯೋಗಿ ವಸ್ತುಗಳ ಖರೀದಿಗೆ ಬಂದು ಹೋಗದಂತಂಹ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸಭೆಯಲ್ಲಿ ಸಾರ್ವಜನಿಕರು ಪ್ರಸ್ತಾಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ಇಲ್ಲಿನ ಸಾಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ವಿನಾಯಕ ವೃತ್ತದಿಂದ ಕಾಲೇಜ್‌ವರೆಗಿನ ರಸ್ತೆಗೆ ಡಬಲ್ ರೋಡ್ ನಿರ್ಮಾಣಕ್ಕೆ ಸರ್ಕಾರ 5.13.ಕೋಟಿ ರೂ. ವೆಚ್ಚದಲ್ಲಿ ಡಿವೈಡರ್ ಮತ್ತು ಬಾಕ್ಸ್ ಚರಂಡಿ ಮತ್ತು ಡಾಂಬರೀಕರಣ ರಸ್ತೆ ವಿದ್ಯುತ್ ಲೈನ್ ಸ್ಥಳಾಂತರಕ್ಕಾಗಿ ಅನುದಾನವನ್ನು ನೀಡುವ ಮೂಲಕ ಕಾಮಗಾರಿ ಆರಂಭವಾಗಿದ್ದು ಖಾಸಗಿ ವ್ಯಕ್ತಿಯೊಬ್ಬರು ತಮ್ಮ ಅಂಗಡಿ ಮಳಿಗೆಯ ಜಾಗವನ್ನು ತೆರವುಗೊಳಿಸದೆ ಇರುವುದರಿಂದಾಗಿ ಅಭಿವೃದ್ದಿ ಕಾಮಗಾರಿಗೆ ಹಿನ್ನಡೆಯಾಗಿದೆ. ತಕ್ಷಣ ಅಂಗಡಿಯನ್ನು ತೆರವುಗೊಳಿಸಿ ಅಭಿವೃದ್ದಿ ಕಾಮಗಾರಿಗೆ ಅನುಕೂಲ ಮಾಡಿಕೊಡುವಂತೆ ಗ್ರಾಮಸಭೆಯಲ್ಲಿ ಒಕ್ಕೊರಲ ನಿರ್ಧಾರವನ್ನು ಪ್ರಕಟಿಸಿದರು.

ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಔಷಧಿಗಳು ಸರಿಯಾಗಿ ಲಭ್ಯವಾಗುತ್ತಿಲ್ಲ ಎಂಬ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿದ ವೈದ್ಯಾಧಿಕಾರಿಗಳು, ಈ ಆಸ್ಪತ್ರೆ ವ್ಯಾಪ್ತಿಗೆ ಸುಮಾರು 75 ಕ್ಕೂ ಹೆಚ್ಚಿನ ಮಜರೆ ಮತ್ತು ಗ್ರಾಮಗಳು ಒಳಪಡುತ್ತಿದ್ದು ನಿತ್ಯ ನೂರಾರು ಜನ ರೋಗಿಗಳು ಬಂದು ಚಿಕಿತ್ಸಾ ಸೌಲಭ್ಯವನ್ನು ಪಡೆಯುತ್ತಿದ್ದು ಸಣ್ಣ-ಪುಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿತರಿಸುವಂತೆ ನಮ್ಮ ಆರೋಗ್ಯ ಕೇಂದ್ರಕ್ಕೂ ಅದೇ ಮಾನದಂಡದಲ್ಲಿ ಔಷಧಿ ಮಾತ್ರೆಗಳನ್ನು ಸರಬರಾಜು ಮಾಡಲಾಗುತ್ತಿದ್ದು ಇದರಿಂದ ನಮಗೆ ತೀವ್ರ ಸಮಸ್ಯೆಯಾಗುವಂತಾಗಿ ನಾವು ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಬರೆಯಬೇಕಾದ ಅನಿರ್ವಾಯತೆ ಎದುರಾಗಿದೆ ಎಂದು ತಮ್ಮ ಅಸಹಾಕತೆಯನ್ನು ವ್ಯಕ್ತಪಡಿಸಿದರು.

ಅಲ್ಲದೆ ಸಾರ್ವಜನಿಕರಿಗೆ ಹತ್ತಿರದಲ್ಲಿ ಸಿಗಬೇಕಾದಂತಹ ಹೋಬಳಿ ನಾಡಕಛೇರಿ ಕಟ್ಟಡ ಸ್ಥಳಾಂತರಗೊಂಡ ಪರಿಣಾಮದಿಂದಾಗಿ ರೈತ ನಾಗರೀಕರು ದೂರದಿಂದ ಬಂದು ಕಛೇರಿ ಹುಡುಕುವಂತಾಗಿದೆ. ತಕ್ಷಣ ಸ್ಥಳಾಂತರಗೊಂಡ ನಾಡಕಛೇರಿಯನ್ನು ಮುಖ್ಯ ರಸ್ತೆಗೆ ತರುವ ಮೂಲಕ ರೈತ ನಾಗರೀಕರಿಗೆ ಅನುಕೂಲ ಮಾಡಿಕೊಡುವಂತೆ ಸಹ ಸಭೆಯಲ್ಲಿ ಪ್ರಸ್ತಾಪಿಸಲಾಯಿತು.

ಚೌಡೇಶ್ವರಿ ದೇವಸ್ಥಾನ ಮತ್ತು ಎಸ್.ಸಿ ಕಾಲೋನಿ ಹಾಗೂ ಇನ್ನಿತರ ಕಡೆಗಳಲ್ಲಿ ಮಳೆ ನೀರು ನುಗ್ಗಿ ಸಾಕಷ್ಟು ರಸ್ತೆಗಳಲ್ಲಿ ಓಡಾಡದಂತಹ ಸ್ಥಿತಿಯಲ್ಲಿದೆ. ತಾವು ಬೇಗ ದುರಸ್ಥಿಗೊಳಿಸುವಂತೆ ಸಭೆಯಲ್ಲಿ ಸಾರ್ವಜನಿಕರ ಪರವಾಗಿ ಮಂಜುನಾಥ ಆಚಾರ್ ಗಮನ ಸೆಳೆದರು. ಹಲವು ಬಡಾವಣೆಯಲ್ಲಿ ಸ್ವಚ್ಚತೆ ಇಲ್ಲದೆ ಕಲುಷಿತ ನೀರು ಶೇಖರಣೆಗೊಂಡು ಡೇಂಗ್ಯೂ ಮಾರಕ ರೋಗಕ್ಕೆ ಎರಡು ಬಲಿಯಾಗಿದ್ದು ಅಲ್ಲದೆ ಗ್ರಾಮದಲ್ಲಿ ಸಾಕಷ್ಟು ಸ್ವಚ್ಚತೆ ಇಲ್ಲದಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಉತ್ತರಿಸಿ ಈಗಾಗಲೇ ಹೋಟೆಲ್ ಬೇಕರಿ ಮತ್ತು ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆ ಮತ್ತು ತೀವ್ರ ಮಳೆಯಿಂದಾಗಿ ರಸ್ತೆಗಳು ಹೊಂಡ ಗುಂಡಿ ಬಿದ್ದು ವಾಹನ ಸವಾರರು ಓಡಾದಂತಹ ಸ್ಥಿತಿಯಲ್ಲಿದ್ದು ಸರ್ಕಾರಕ್ಕೆ ಮಳೆ ಹಾನಿಯ ವರದಿಯನ್ನು ನೀಡಲಾಗಿದೆ ಎಂದು ವಿವರಿಸಿದರು.

ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ವಹಿಸಿದ್ದರು. ನೋಡಲ್ ಅಧಿಕಾರಿ ಪಶುವೈದ್ಯಾಧಿಕಾರಿ ಡಾ.ದಯಾನಂದ್, ಪಿಡಿಓ ಮಧುಸೂದನ್ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪಿಎಸ್‌ಐ ಎಸ್.ಪಿ.ಪ್ರವೀಣ್ ಗ್ರಾಮ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗ ಅಂಗನವಾಡಿ, ಆಶಾ ಕಾರ್ಯಕರ್ತೆರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

16 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

22 hours ago