ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಭೆಯಲ್ಲಿ ಪಟ್ಟಣದ ಆಸ್ಪತ್ರೆಯ ಸಮಸ್ಯೆಗಳ ಕುರಿತು ಮಾತನಾಡಿದ ಅವರು ನಮಗೆ ಹಾಗೂ ನಮ್ಮ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಇಲ್ಲದಿದ್ದರೆ ಚಿಕಿತ್ಸೆ ಕೊಡುವುದಾದರು ಹೇಗೆ ಎಂಬ ಚಿಂತೆ ಕಾಡುವಂತಾಗಿದೆ ಎಂದು ಸಭೆಯ ಗಮನ ಸೆಳೆದರು.

ಕೆನರಾ ಬ್ಯಾಂಕ್ ನ ಅವ್ಯವಸ್ಥೆ

ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಗ್ರಾಹಕರಿಗೆ ಅನವಶ್ಯಕವಾಗಿ ಕಿರುಕುಳ ನೀಡುತಿದ್ದಾರೆ ಎಂಬ ಸಾರ್ವಜನಿಕರ ಆರೋಪದ ಹಿನ್ನಲೆಯಲ್ಲಿ ಬ್ಯಾಂಕ್ ಅಧಿಕಾರಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಈ ಸಂಧರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಮಂಜುಳಾ ಕೆ ರಾವ್ ಎದ್ದು ನಿಂತು ಬ್ಯಾಂಕ್ ಸಿಬ್ಬಂದಿಗಳ ಉದ್ದಟತನದ ಬಗ್ಗೆ ಕೆಂಡಮಂಡಲರಾಗಿ ಸ್ವತಃ ತನಗಾದ ಅನುಭವದ ಕುರಿತು ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಗ್ರಾಹಕರೊಂದಿಗಿನ ಸಿಬ್ಬಂದಿಗಳ ವರ್ತನೆಯನ್ನು ಸರಿಪಡಿಸಿಕೊಳ್ಳುವಂತೆ ಹೇಳಿದರು.

ಒತ್ತುವರಿ ಸಮಸ್ಯೆ

ಈ ಸಭೆಯಲ್ಲಿ ಕೆಲ ಗ್ರಾಪಂ ಸದಸ್ಯರು ಅರಣ್ಯ ಅಧಿಕಾರಿಗಳಿಂದ ನಡೆಯುತ್ತಿರುವ ಒತ್ತುವರಿ ತೆರವಿನ ಬಗ್ಗೆ ಪ್ರಸ್ತಾಪಿಸಿದಾಗ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ಮಾತನಾಡಿ ಚಿಕ್ಕ ಹಿಡುವಳಿದಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು  ಅನಧಿಕೃತವಾಗಿ ಹತ್ತಾರು ಎಕರೆಗಳನ್ನು ಒತ್ತುವರಿ ಮಾಡಿ ಅರಣ್ಯ ನಾಶ ಮಾಡಿ ಒತ್ತುವರಿ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯವಾಗಿ ತೆರವುಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ ಈ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳುತಿದ್ದೇವೆ ಎಂದು ಸಭೆಯಲ್ಲಿ ತಿಳಿಸಿದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಬಳಿ ಮಹಾದ್ವಾರ ಅಳವಡಿಸುವಂತೆ ಹಾಗೂ ಗ್ರಂಥಾಲಯ, ಪಾರ್ಕಿಂಗ್ ವ್ಯವಸ್ಥೆ ಹೀಗೆ ವಿವಿಧ ಇಲಾಖೆಯವರು ಸಮಸ್ಯೆಗಳ ಬಗ್ಗೆ ಕೆಡಿಪಿ ಸಭೆಯಲ್ಲಿ ಚರ್ಚಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಆಸಿಫ್ ಭಾಷಾ ಎನ್ ಚಂದ್ರೇಶ್,ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

————————————————————————————

ಹೊಸನಗರ ತಾಲೂಕ್ ಕೆಡಿಪಿ ಸದಸ್ಯರಾಗಿ ನಾಮ ನಿರ್ದೇಶಿತರಾದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ಆಸೀಫ಼್ ಭಾಷಾ ರವರನ್ನು ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 hour ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

6 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

7 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

7 hours ago