ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್
ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು ಅರಿತ ಎಸ್ಪಿ ಮಿಥುನ್ ಕುಮಾರ್, ರವರು ಕೆಲವೊಂದು ಎಚ್ಚರಿಕೆಗಳನ್ನ ನೀಡಿದ್ದಾರೆ.
ಎಸ್ ಪಿ ಮಿಥುನ್ ಕುಮಾರ್ ಜಿ.ಕೆ ರೌಡಿ ಪರೇಡ್ನಲ್ಲಿ ಹಿಸ್ಟರಿ ಶೀಟರ್ಗಳಿಗೆ ಈ ಕೆಳಕಂಡಂತೆ ಎಚ್ಚರಿಕೆ ನೀಡಿದ್ದಾರೆ.
1) ವಾರದಲ್ಲಿ 02 ಬಾರಿ ಕಡ್ಡಾಯವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹೋಗಿ ಹಾಜರಾತಿ ನೀಡುವುದು.
2) ನಿಮ್ಮ ಚಟುವಟಿಕೆ ಮತ್ತು ಚಲನ ವಲನಗಳ ಮೇಲೆ ನಿಗಾ ಇಡಲಾಗಿದ್ದು, ಒಂದು ವೇಳೆ ಯಾವುದಾದರೂ ಕಾನೂನು ಬಾಹೀರ ಚಟುವಟಿಕೆ ಮತ್ತು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡು ಬಂದಲ್ಲಿ, ಗಡಿಪಾರು ಮತ್ತು ಗೂಂಡಾ ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು.
3) ನಿಮ್ಮ ಆದಾಯದ ಮೂಲ ಮತ್ತು ಸ್ನೇಹಿತರ ಕುರಿತು ಪೊಲೀಸ್ ಇಲಾಖೆಯಿಂದ ನಿರಂತರವಾಗಿ ನಿಗಾ ಇಡಲಾಗುವುದು, ಒಂದು ವೇಳೆ ನೀವು ಸ್ನೇಹಿತರನ್ನು ಸೇರಿಸಿಕೊಂಡು ಗುಂಪು ಕಟ್ಟಿಕೊಂಡು ಅಡ್ಡಗಳನ್ನು ಮಾಡಿಕೊಳ್ಳುವುದು, ರಾತ್ರಿ ವೇಳೆ ಮನೆಯಲ್ಲಿರದೇ ಅನಾವಶ್ಯಕವಾಗಿ ಹೊರಗಡೆ ಸುತ್ತಾಡುವುದು ಕಂಡು ಬಂದಲ್ಲಿ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು.
4) ಹೇರ್ ಕಟಿಂಗ್ ಮತ್ತು ಶೇವಿಂಗ್ ಮಾಡಿಸಿಕೊಂಡು, ಶಿಸ್ತಾಗಿ ಕಾಣುವಂತಹ ಉಡುಪುಗಳನ್ನು ಧರಿಸಿ ಮತ್ತು ಕಾನೂನನ್ನು ಗೌರವಿಸಿ ಹಾಗೂ ಕಾನೂನನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವಿಸಿ
ಒಳ್ಳೆಯ ರೀತಿಯಲ್ಲಿ ಬದುಕಿದರೆ ನಿಮಗೆ ಒಳ್ಳೆಯದು. ಇಲ್ಲದೇ ಹೋದಲ್ಲಿ ಪೊಲೀಸ್ ಇಲಾಖೆಯು ನಿಮ್ಮ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…