Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ.
ತುಂಗ ನಗರ ಠಾಣೆಯ ಪಿಐ ಮಂಜುನಾಥ್ ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ ಹಾಗೂ ಸಿಬ್ಬಂಧಿಗಳಾದ ಹೆಚ್.ಸಿ ಕಿರಣ್ ಮೋರೆ, ಅರುಣ್ ಕುಮಾರ್, ಪಿಸಿ ಹರೀಶ್ ನಾಯ್ಕ್, ನಾಗಪ್ಪ, ಲಂಕೇಶ್, ಹರೀಶ್, ಜಯ್ಯಪ್ಪ ಮತ್ತು ರಮೇಶ್ ರವರುಗಳನ್ನು ಒಳಗೊಂಡ ತಂಡವನ್ನು ಈ ಕಾರ್ಯಾಚರಣೆ ನಡೆಸಿದೆ.
ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿತರಾದ 1)ಇಮ್ದಾದ್ ಖಾನ್, 42 ವರ್ಷ, ಜೆಪಿ ನಗರ ಶಿವಮೊಗ್ಗ, 2) ಸಿದ್ದಿಕ್ ಭಾಷಾ @ ಸಿದ್ದು, 30 ವರ್ಷ, ಆರ್ ಎಂ ಎಲ್ ನಗರ ಶಿವಮೊಗ್ಗ ಮತ್ತು 3) ಫೈರೋಜ್ ಖಾನ್ @ ಗಿಡ್ಡು, 34 ವರ್ಷ, ಇಂದಿರಾನಗರ ಶಿವಮೊಗ್ಗ ಇವರನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿತರಿಂದ ಅಂದಾಜು ಮೌಲ್ಯ 58,000/- ರೂಗಳ 14.5 ಕೆ.ಜಿ ತೂಕದ ಶ್ರೀ ಗಂಧದ ತುಂಡುಗಳು ಮತ್ತು ಕೃತ್ಯಕ್ಕೆ ಬಳಸಿದ ಆಲ್ಟೋ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ.
ಸದರಿ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…