Breaking
12 Jan 2026, Mon

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.

ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ.

ತಂದೆ-ಮಗಳ ನಿಸ್ವಾರ್ಥ ಸೇವೆ ಕಂಡು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರವಿ ಎಸ್ ಹಾಗೂ ಮಗಳು ಧನುಶ್ರೀ ಇಬ್ಬರನ್ನು ಗೌರವಿಸಿ ಸನ್ಮಾನಿಸಲಾಯಿತು.

ಶಿವಮೊಗ್ಗ ಜಿಲ್ಲಾ ಪೊಲಿಸ್ ಕಚೇರಿಯಲ್ಲಿ ರವಿ ಎಸ್ ಹಾಗೂ ಮಗಳು ಧನುಶ್ರೀಗೆ ಎಸ್ ಪಿ ಮಿಥುನ್ ಕುಮಾರ್ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈ ಎಸ್ ಪಿ ಬಾಬು ಆಂಜನಪ್ಪ, ಸುರೇಶ್ ಎಂ ಉಪಸ್ಥಿತರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *