ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ
ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ.
ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ.
ತಂದೆ-ಮಗಳ ನಿಸ್ವಾರ್ಥ ಸೇವೆ ಕಂಡು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರವಿ ಎಸ್ ಹಾಗೂ ಮಗಳು ಧನುಶ್ರೀ ಇಬ್ಬರನ್ನು ಗೌರವಿಸಿ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲಾ ಪೊಲಿಸ್ ಕಚೇರಿಯಲ್ಲಿ ರವಿ ಎಸ್ ಹಾಗೂ ಮಗಳು ಧನುಶ್ರೀಗೆ ಎಸ್ ಪಿ ಮಿಥುನ್ ಕುಮಾರ್ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈ ಎಸ್ ಪಿ ಬಾಬು ಆಂಜನಪ್ಪ, ಸುರೇಶ್ ಎಂ ಉಪಸ್ಥಿತರಿದ್ದರು.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…