ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ರಿಟರ್ನಿಂಗ್ ಆಫೀಸರ್ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು.
ಶಿವಮೊಗ್ಗ ವಿಭಾಗ :
ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಸಾಗರ ವಿಭಾಗ :
ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.
ದಾವಣಗೆರೆ ವಿಭಾಗ :
ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ವಿಭಾಗ :
ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…