Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
ರಿಪ್ಪನ್ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ. ಅವರ ವಾಹನದಲ್ಲಿ ಹಲವು ತಾಂತ್ರಿಕ ದೋಷಗಳು ಕಾಣಿಸಿಕೊಂಡಿವೆ. ಆದ್ದರಿಂದ ಅವರು ಭೂಮಿಗೆ ತೆರಳದೇ ಅಲ್ಲೇ ಉಳಿಯುವಂತಾಗಿದೆ. ಎರಡು ಬಾರಿ ಯಶಸ್ವಿಯಾಗಿ ಗಗನಯಾತ್ರೆ ಮಾಡಿದಾಗ ಇಡೀ ದೇಶವೇ ಸಂಭ್ರಮಿಸಿತ್ತು. ಅವರು ಭೂಮಿಗೆ ಜೂನ್ 14ರಂದು ವಾಪಾಸ್ಸಾಗಬೇಕಿತ್ತು. ಆದರೆ, ಈಗಾಗಲೇ ಎರಡು ತಿಂಗಳು ಹೆಚ್ಚುವರಿಯಾಗಿದೆ.ಅವರು ಸುರಕ್ಷಿತವಾಗಿ ಭೂಮಿಗೆ ಹಿಂದಿರಗಬೇಕು. ಭಾರತ ದೇಶಕ್ಕೆ ಮತ್ತಷ್ಟು ಕೀರ್ತಿ ತರಬೇಕು ಎಂದು ಪ್ರಾರ್ಥಿಸಿ ಸಿದ್ದಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ರೇಖಾ ರವಿ ರಾವ್, ಗೀತಾ ಕರಿಬಸಪ್ಪ, ಲಕ್ಷ್ಮೀ ಶ್ರೀನಿವಾಸ, ನಾಗರತ್ನ ದೇವರಾಜ್, ಅರ್ಚಕರಾದ ಚಂದ್ರಶೇಖರ್ ಭಟ್ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್