Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
ರಿಪ್ಪನ್ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ. ಅವರ ವಾಹನದಲ್ಲಿ ಹಲವು ತಾಂತ್ರಿಕ ದೋಷಗಳು ಕಾಣಿಸಿಕೊಂಡಿವೆ. ಆದ್ದರಿಂದ ಅವರು ಭೂಮಿಗೆ ತೆರಳದೇ ಅಲ್ಲೇ ಉಳಿಯುವಂತಾಗಿದೆ. ಎರಡು ಬಾರಿ ಯಶಸ್ವಿಯಾಗಿ ಗಗನಯಾತ್ರೆ ಮಾಡಿದಾಗ ಇಡೀ ದೇಶವೇ ಸಂಭ್ರಮಿಸಿತ್ತು. ಅವರು ಭೂಮಿಗೆ ಜೂನ್ 14ರಂದು ವಾಪಾಸ್ಸಾಗಬೇಕಿತ್ತು. ಆದರೆ, ಈಗಾಗಲೇ ಎರಡು ತಿಂಗಳು ಹೆಚ್ಚುವರಿಯಾಗಿದೆ.ಅವರು ಸುರಕ್ಷಿತವಾಗಿ ಭೂಮಿಗೆ ಹಿಂದಿರಗಬೇಕು. ಭಾರತ ದೇಶಕ್ಕೆ ಮತ್ತಷ್ಟು ಕೀರ್ತಿ ತರಬೇಕು ಎಂದು ಪ್ರಾರ್ಥಿಸಿ ಸಿದ್ದಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದರು.
ಈ ಸಂಧರ್ಭದಲ್ಲಿ ರೇಖಾ ರವಿ ರಾವ್, ಗೀತಾ ಕರಿಬಸಪ್ಪ, ಲಕ್ಷ್ಮೀ ಶ್ರೀನಿವಾಸ, ನಾಗರತ್ನ ದೇವರಾಜ್, ಅರ್ಚಕರಾದ ಚಂದ್ರಶೇಖರ್ ಭಟ್ ಹಾಗೂ ಇನ್ನಿತರರಿದ್ದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…