THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!
ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ.
ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ.
ಅಧ್ಯಕ್ಷರು ಉಪಾಧ್ಯಕ್ಷರು ಬದಲಾವಣೆ
ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ ಉಪಾಧ್ಯಕ್ಷರಾಗಿದ್ದ ರಹಮತುಲ್ಲ ಅಸಾದಿ ಅಧ್ಯಕ್ಷರಾಗಿ ಬದಲಾವಣೆ ಆಗಿದ್ದಾರೆ.
ನಾಮಪತ್ರ ಸಲ್ಲಿಸಿದ್ದವರು ಯಾರು?
ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ರಹಮತುಲ್ಲ ಅಸಾದಿ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಮೇಶ್ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತ ಇದ್ದ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು ಅದೃಷ್ಟ ಅಸಾದಿ ಕೈ ಹಿಡಿದಿದೆ.
ಜೋಡೆತ್ತುಗಳ ದರ್ಬಾರ್!
ಕಾಂಗ್ರೆಸ್ ಪಕ್ಷದ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಪಟ್ಟಣ ಪಂಚಾಯತ್ ಸದಸ್ಯರಿಗೆ ವಿಪ್ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಸಮೀಪದ ರೆಸಾರ್ಟ್ ಒಂದರಲ್ಲಿ ಎಲ್ಲರನ್ನು ಗೌಪ್ಯವಾಗಿ ಇಟ್ಟುಕೊಂಡು ಚುನಾವಣೆ ಗೆಲ್ಲುವ ಸಲುವಾಗಿ ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದರು. ಒಟ್ಟಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ್ತೊಮ್ಮೆ ಜೋಡೆತ್ತುಗಳ ದರ್ಬಾರ್ ಮುಂದುವರೆದಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…