ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು
ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.
ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು.
ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಡಿಢೀರ್ ದಾಳಿ ನಡೆಸಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹನುಮಂತಪ್ಪ ಅವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…