ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ.

ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಗ್ರಾಮಸ್ಥರು ಸ್ಥಳೀಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಶಾಸಕ ಬೇಳೂರು ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಭೂಮಿ ಹಕ್ಕಿಗಾಗಿ ಹೋರಾಟ ಮಾಡುತ್ತಿರುವ ಮುಳುಗಡೆ ಸಂತ್ರಸ್ಥರೊಂದಿಗೆ ಸಂಘರ್ಷಕ್ಕೆ ಇಳಿಯದೆ ಅವರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ಸೂಚಿಸಿ ,ಹಳೆಯ ಒತ್ತುವರಿಯನ್ನು ಹೊರತುಪಡಿಸಿ ಹೊಸದಾಗಿ ಅರಣ್ಯ ನಾಶಕ್ಕೆ ಮುಂದಾಗದಂತೆ ಗ್ರಾಮಸ್ಥರಿಗೆ ಖಡಕ್ ವಾರ್ನಿಂಗ್ ನೀಡಿದರು.

ಗ್ರಾಮಸ್ಥರು ಅಹವಾಲು ಸಲ್ಲಿಸುವ ವೇಳೆಯಲ್ಲಿ ಮೂಗೂಡ್ತಿ ವನ್ಯಜೀವಿ ವಲಯದ ಅರಣ್ಯ ಸಿಬ್ಬಂದಿ ಪಾಂಡುರಂಗ ರವರ ಮೇಲೆ ಗ್ರಾಮಸ್ಥರು ಮುಗಿಬಿದ್ದು ಆರೋಪ ಮಾಡುತ್ತಿರುವಾಗ ಶಾಸಕರ ಸಮ್ಮುಖದಲ್ಲಿಯೇ ಅರಣ್ಯ ಸಿಬ್ಬಂದಿ ಗ್ರಾಮಸ್ಥರಿಗೆ ಏರುಧ್ವನಿಯಲ್ಲಿ ಮಾತನಾಡಿದ್ದು ಶಾಸಕರ ಗಮನಿಸಿ ಗ್ರಾಮಸ್ಥರೊಂದಿಗೆ ಸೌಮ್ಯವಾಗಿ ವರ್ತಿಸುವಂತೆ ಸಿಬ್ಬಂದಿಗೆ ವಾರ್ನಿಂಗ್ ನೀಡಿದ ಪ್ರಸಂಗ ನಡೆಯಿತು.

ಅರಣ್ಯ ಇಲಾಖೆಗೆ ನಮ್ಮ ಜೀವನಕ್ಕಿಂತ ಭೂಮಿಯೇ ಮುಖ್ಯವಾಗಿದ್ದರೆ ನಮ್ಮನೆಲ್ಲಾ ಸಾಮೂಹಿಕ ಹತ್ಯೆ ಮಾಡಿಬಿಡಿ ಎಂದು ಮುಳುಗಡೆ ಸಂತ್ರಸ್ಥರೊಬ್ಬರು ತಮ್ಮ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗವೂ ನಡೆಯಿತು.

ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ ನಂತರ ಮಾತನಾಡಿದ ಶಾಸಕ ಬೇಳೂರು ಭೂ ಹಕ್ಕು ಕೊಡಿಸುವ ನಿಟ್ಟಿನಲ್ಲಿ ನಾನು ಮತ್ತು ಸಚಿವ ಮಧುಬಂಗಾರಪ್ಪ ಈಗಾಗಲೇ ನಾಲ್ಕೈದು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ನ್ಯಾಯಲಯದಲ್ಲಿ ಖಾಸಗಿ ವಕೀಲರನ್ನು ಸಹ ನೇಮಿಸಿದ್ದೇವೆ. ಪ್ರಸ್ತುತ ನೀವು ವಾಸವಿರುವ ಜಾಗವನ್ನು ಒತ್ತುವರಿ ಮಾಡಲು ನಾವು ಅವಕಾಶ ನೀಡುವುದಿಲ್ಲ ಹೊಸದಾಗಿ ಅರಣ್ಯ ನಾಶಕ್ಕೆ ಮುಂದಾಗಬೇಡಿ ಎಂದು ಹೇಳಿ ಅರಣ್ಯಾಧಿಕಾರಿಗಳು ಈ ಭಾಗದಲ್ಲಿ ಯಾವುದೇ ರೈತರಿಗೂ ಹೊಸದಾಗಿ ನೋಟೀಸ್ ಜಾರಿ ಮಾಡದಂತೆ ವನ್ಯಜೀವಿ ವಲಯದ DFO ರವರಿಗೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ಶಿವಮೊಗ್ಗ ವನ್ಯಜೀವಿ ವಲಯದ DFO ಪ್ರಸನ್ನ ಕೃಷ್ಣ ಪಟಗಾರ್ , ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ಮುಖಂಡರಾದ ಉಮಾಕರ್ ಕಾನುಗೋಡು ,ಬೆಳ್ಳೂರು ಯೋಗೀಶ್ ,ಮಧುಸೂಧನ್, ಮಹೇಂದ್ರ ಬುಕ್ಕಿವರೆ ,ಪ್ರವೀಣ್ ಲಕ್ಷ್ಮಿಕಾಂತ್ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ,ಪಿಎಸ್‌ಐ ಪ್ರವೀಣ್ ಎಸ್ ಪಿ , ಕಂದಾಯ ಇಲಾಖೆಯ ಸೈಯದ್ ಅಫ಼್ರೋಜ್ ,ಸ್ಥಳೀಯ ಅರಣ್ಯಾಧಿಕಾರಿಗಳು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

1 hour ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

3 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

3 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

19 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

23 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

23 hours ago