ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?

ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ.

ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು ನಗುಮಗು ಆಂಬುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗುತಿತ್ತು ಆದರೆ ಆಂಬುಲೆನ್ಸ್ ಚಾಲಕ ಬಾಲಚಂದ್ರ ಎಂಬಾತನು ಪಾನಮತ್ತನಾಗಿ ವಾಹನ ಚಲಾಯಿಸಿದ್ದರಿಂದ ದೂನ ಸಮೀಪದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ತಾಯಿ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇದೇ ಸಮಯಕ್ಕೆ ಸರಿಯಾಗಿ ಮತ್ತೊಂದು 108 ಆಂಬುಲೆನ್ಸ್ ಈ ಮಾರ್ಗವಾಗಿ ಬಂದಿದ್ದು ಗಾಯಾಳುಗಳನ್ನು 108 ಆಂಬುಲೆನ್ಸ್ ಗೆ ಶಿಫ್ಟ್ ಮಾಡಲು ಹೊರಟಾಗ ಕುಟುಂಬಸ್ಥರು ‘ಆಂಬುಲೆನ್ಸ್ ಸಹವಾಸವೇ ಬೇಡ’ ಎಂದು ಖಾಸಗಿ ಕಾರಿನಲ್ಲಿ ತಾಯಿ ಮಗುವನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ತೆರಳಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಪಾನಮತ್ತ ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಸವ ವೇದನೆ ಅನುಭವಿಸುವವರನ್ನು ಸರಕಾರಿ ಆಸ್ಪತ್ರೆಗಳಿಗೆ ಕರೆತಂದರೆ, ಹೆರಿಗೆ ನಂತರ ಬಾಣಂತಿ ಮತ್ತು ಮಗುವನ್ನು ಸುರಕ್ಷಿತವಾಗಿ ಮನೆ ತಲುಪಿಸಲು ರಾಜ್ಯ ಸರಕಾರ, ‘ನಗು ಮಗು ಆಂಬ್ಯುಲನ್ಸ್’ ಸೇವೆ ಜಾರಿಗೆ ತಂದಿದ್ದು ಆದರೆ ಆಂಬುಲೆನ್ಸ್ ಚಾಲಕನೇ ಪಾನಮತ್ತನಾಗಿ ಮಗುವಿನ ನಗು ಕಸಿದು ಉಸಿರು ತೆಗೆಯಲು ಹೊರಟರೇ ಬಾಣಂತಿ, ಮಗುವಿನ ಪಾಡನ್ನು ಕೇಳೋರ್ಯಾರು..!!?

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

32 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

46 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago