ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ
ರಿಪ್ಪನ್ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು.
ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು.
ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ ಭಾಗ್ಯ ಹೀಗೆ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವಂತೆ ತಾಯಿಯಲ್ಲಿ ಹರಿಕೆ ಹಣ್ಣು ಕಾಯಿ ಸಮರ್ಪಿಸುತ್ತಾ ಮಹಿಳೆಯರು ಮತ್ತು ಯುವತಿಯರು ದೇವಿಯ ಬಳಿ ಪ್ರಾರ್ಥಿಸುತ್ತಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸಿ,ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಬಿ.ಸ್ವಾಮಿರಾವ್, ಧರ್ಮದರ್ಶಿಗಳಾದ ಕೆ.ಎಲ್.ಸುದೀರ್, ಸಂತೋಷ,ಹೆಚ್.ಕೆ.ಹರೀಶ್ಕಲ್ಯಾಣಪ್ಪಗೌಡ,ಪುಟ್ಟಪ್ಪ, ಶ್ರೀನಿವಾಸ ಹಿಂಡ್ಲೆಮನೆ,ರತ್ನಮ್ಮ ಕುನ್ನೂರು,ಸರೋಜ ದೇವರಾಜ್,ಕೋಡೂರು ಗ್ರಾಮ ಪಂಚಾಯ್ತಿ ಸದಸ್ಯ ಜೈಪ್ರಕಾಶ್,ಕೋಡೂರು ವಿಜೇಂದ್ರಭಟ್, ಬೆಳ್ಳೂರು ಡಾಕಪ್ಪ, ಹರತಾಳು ರಾಮಚಂದ್ರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಎ.ಟಿ.ನಾಗರತ್ನಮ್ಮ ಇನ್ನಿತರರು ಹಾಜರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…