ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಕೆಲಸದ ನಿಮಿತ್ತ ಆಗಮಿಸುವ ಮಹಿಳೆಯರಿಗೆ ಭದ್ರತೆ ನೀಡಲು ಸಮಾಜದ ದಾನಿಗಳ ಸಹಕಾರದೊಂದಿಗೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಯೋಜನೆಗೆ ಹಾಗೂ ಸಮಾಜದ ಮಹಿಳಾ ಸಬಲೀಕರಣಕ್ಕಾಗಿ ಆಚರದ ಶರಣೆ ಅಕ್ಕಮ್ಮ ಟ್ರಸ್ಟ್‌ಗೆ ಚಾಲನೆ ನೀಡಲಾಗುವುದು ಎಂದರು. ರಾಜ್ಯ ಮಟ್ಟದ ಈಡಿಗ, ಬಿಲ್ಲವ, ನಾಮಧಾರಿ, ದೀವರು, ತೀಯಾ ಸಮಾಜದ 25 ಒಳಪಂಗಡಗಳ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಸಮಾರಂಭದ ಸಾನಿಧ್ಯವನ್ನು ಆರ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಗೌರಿಗದ್ದೆಯ ಅವಧೂತ ಆಶ್ರಮದ ಶ್ರೀ ವಿನಯ ಗುರೂಜೀ, ಶ್ರೀಕ್ಷೇತ್ರ ಸಿಗಂಧೂರಿನ ಧರ್ಮಾಧಿಕಾರಿ ಶ್ರೀ ಡಾ.ರಾಮಪ್ಪ ವಹಿಸಲಿದ್ದು, ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್‌ ಕುಮಾ‌ ಉದ್ಘಾಟಿಸುವರು ಎಂದರು.

ಶ್ರೀನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಪುಷ್ಪಾರ್ಚನೆ ಮಾಡಲಿದ್ದು, ಆಚರದ ಚೌಧರಿ ಪುಷ್ಪಾರ್ಚನೆ ಮಾಡಲಿದ್ದು, ಆಚರದ ಶರಣೆ ಅಕ್ಕಮ್ಮ ಟ್ರಸ್ಟ್‌ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧುಬಂಗಾರಪ್ಪ ಹಾಗೂ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಯೋಜನೆಗೆ ಸಂಸದ ಕೋಟಾ” ಶ್ರೀನಿವಾಸ್ ಪೂಜಾರಿ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ಜಗದೈವ ಗುತ್ತೆದಾರ್, ಹೆಚ್.ಆರ್. ಗವಿಯಪ್ಪ ಧಣಿ, ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಸುನೀಲ್ ಬಿ.ನಾಯ್ಕ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಆಗಮಿಸಲಿದ್ದಾರೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಎಸ್.ಡಿ.ನಾಯ್ಕ ಮಾತನಾಡಿ, ಸಮಾವೇಶಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಜಯಲಕ್ಷ್ಮೀ, ಪ್ರತಿಮಾ, ಸವಿತಾ, ವಿಶ್ವನಾಥ್, ಲೋಕೇಶ್, ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು. ರೇಣುಕಾ,

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

14 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

14 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

14 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

17 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

21 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

21 hours ago