ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್
ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್ನಲ್ಲಿ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಕೆಲಸದ ನಿಮಿತ್ತ ಆಗಮಿಸುವ ಮಹಿಳೆಯರಿಗೆ ಭದ್ರತೆ ನೀಡಲು ಸಮಾಜದ ದಾನಿಗಳ ಸಹಕಾರದೊಂದಿಗೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಯೋಜನೆಗೆ ಹಾಗೂ ಸಮಾಜದ ಮಹಿಳಾ ಸಬಲೀಕರಣಕ್ಕಾಗಿ ಆಚರದ ಶರಣೆ ಅಕ್ಕಮ್ಮ ಟ್ರಸ್ಟ್ಗೆ ಚಾಲನೆ ನೀಡಲಾಗುವುದು ಎಂದರು. ರಾಜ್ಯ ಮಟ್ಟದ ಈಡಿಗ, ಬಿಲ್ಲವ, ನಾಮಧಾರಿ, ದೀವರು, ತೀಯಾ ಸಮಾಜದ 25 ಒಳಪಂಗಡಗಳ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಸಮಾರಂಭದ ಸಾನಿಧ್ಯವನ್ನು ಆರ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಗೌರಿಗದ್ದೆಯ ಅವಧೂತ ಆಶ್ರಮದ ಶ್ರೀ ವಿನಯ ಗುರೂಜೀ, ಶ್ರೀಕ್ಷೇತ್ರ ಸಿಗಂಧೂರಿನ ಧರ್ಮಾಧಿಕಾರಿ ಶ್ರೀ ಡಾ.ರಾಮಪ್ಪ ವಹಿಸಲಿದ್ದು, ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾ ಉದ್ಘಾಟಿಸುವರು ಎಂದರು.
ಶ್ರೀನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಪುಷ್ಪಾರ್ಚನೆ ಮಾಡಲಿದ್ದು, ಆಚರದ ಚೌಧರಿ ಪುಷ್ಪಾರ್ಚನೆ ಮಾಡಲಿದ್ದು, ಆಚರದ ಶರಣೆ ಅಕ್ಕಮ್ಮ ಟ್ರಸ್ಟ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧುಬಂಗಾರಪ್ಪ ಹಾಗೂ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಯೋಜನೆಗೆ ಸಂಸದ ಕೋಟಾ” ಶ್ರೀನಿವಾಸ್ ಪೂಜಾರಿ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ಜಗದೈವ ಗುತ್ತೆದಾರ್, ಹೆಚ್.ಆರ್. ಗವಿಯಪ್ಪ ಧಣಿ, ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಸುನೀಲ್ ಬಿ.ನಾಯ್ಕ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಆಗಮಿಸಲಿದ್ದಾರೆ ಎಂದರು.
ಸಂಘದ ಜಿಲ್ಲಾಧ್ಯಕ್ಷ ಎಸ್.ಡಿ.ನಾಯ್ಕ ಮಾತನಾಡಿ, ಸಮಾವೇಶಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಜಯಲಕ್ಷ್ಮೀ, ಪ್ರತಿಮಾ, ಸವಿತಾ, ವಿಶ್ವನಾಥ್, ಲೋಕೇಶ್, ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು. ರೇಣುಕಾ,
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…