ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು.

ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದು ಶ್ರೀಸಾಮಾನ್ಯನ ಆರ್ಥಿಕ ಅಭಿವೃದ್ಧಿಗೆ ಕಟಿಬದ್ಧವಾಗಿದೆ.ಇತಿಹಾಸ ಪುಟಗಳಲ್ಲಿ ದಾಖಲಾಗುವಂತ ನಿರ್ಧಾರಗಳನ್ನು ತೆಗೆದುಕೊಂಡು ಮತದಾರರ ಬಾಂಧವರಲ್ಲಿ ಹೊಸ ಭರವಸೆ ಮೂಡಿಸಿದೆ. ಸ್ವತಂತ್ರ ಭಾರತ ನೋಡಿರದ ಅಭಿವೃದ್ಧಿ ಕಾರ್ಯಗಳು ದೇಶದಲ್ಲೇಡೆ ನಿರಂತರವಾಗಿ ಸಾಗಿದೆ ಎಂದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಪ್ರಬುದ್ಧ ಆಡಳಿತದಿಂದ ಭಾರತ ವಿಶ್ವಗುರು ಆಗುವತ್ತ ದಾಪುಗಾಲು ಇಟ್ಟಿದೆ. ಭಾರತದೊಂದಿಗೆ ಸ್ನೇಹದ ಹಸ್ತ ಚಾಚಲು ವಿಶ್ವದ ಮುಂದುವರೆದ ರಾಷ್ಟ್ರಗಳು ಹಾತೊರೆಯುತ್ತಿದೆ.ಈ ರೀತಿಯ ಆತ್ಮವಿಶ್ವಾಸದ ದಿಟ್ಟ ಹೆಜ್ಜೆಯಿಂದ ದೇಶವಾಸಿಗಳು ಪಕ್ಷದ ಮೇಲೆ ಹೆಚ್ಚಿನ ವಿಶ್ವಾಸ ಮತ್ತು ನಂಬಿಕೆ ಇಟ್ಟು ಕೇಂದ್ರದಲ್ಲಿ ಸತತ ಮೂರು ಬಾರಿ ಹರಸಿ ಹಾರೈಸುತ್ತಿದ್ದಾರೆ. ಈ ವಿಶ್ವಾಸದ ಹೆಜ್ಜೆಯಲ್ಲಿ ನಾವೆಲ್ಲರೂ ಗಟ್ಟಿಯಾದ ಹೆಜ್ಜೆಯಿಟ್ಟು ಈ ವಿಶೇಷ ಅಭಿಯಾನವನ್ನು ಆಂದೋಲನವಾಗಿ ಪರಿವರ್ತಿಸೋಣ ಎಂದು ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಹೊಸನಗರ ಮಂಡಲ ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಪ್ರಮುಖರಾದ ದತ್ತಾತ್ರೇಯ , ಗಣಪತಿ , ಸುರೇಶ್ ಸ್ವಾಮಿರಾವ್ , ಯುವರಾಜ್, ರಾಜೇಶ್ , ಉಮೇಶ್ ಅವರು ಸೇರಿದಂತೆ ಇನ್ನು ಅನೇಕ ಮುಖಂಡರು ಉಪಸ್ಥಿತರಿದ್ದರು.

ಕೆರೆಹಳ್ಳಿ ಗಣಪತಿಯ ವಿಸರ್ಜನ ಪೂರ್ವ ಮೆರವಣಿಗೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

18 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

19 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

19 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

21 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

1 day ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

1 day ago