ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು.

ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದು ಶ್ರೀಸಾಮಾನ್ಯನ ಆರ್ಥಿಕ ಅಭಿವೃದ್ಧಿಗೆ ಕಟಿಬದ್ಧವಾಗಿದೆ.ಇತಿಹಾಸ ಪುಟಗಳಲ್ಲಿ ದಾಖಲಾಗುವಂತ ನಿರ್ಧಾರಗಳನ್ನು ತೆಗೆದುಕೊಂಡು ಮತದಾರರ ಬಾಂಧವರಲ್ಲಿ ಹೊಸ ಭರವಸೆ ಮೂಡಿಸಿದೆ. ಸ್ವತಂತ್ರ ಭಾರತ ನೋಡಿರದ ಅಭಿವೃದ್ಧಿ ಕಾರ್ಯಗಳು ದೇಶದಲ್ಲೇಡೆ ನಿರಂತರವಾಗಿ ಸಾಗಿದೆ ಎಂದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಪ್ರಬುದ್ಧ ಆಡಳಿತದಿಂದ ಭಾರತ ವಿಶ್ವಗುರು ಆಗುವತ್ತ ದಾಪುಗಾಲು ಇಟ್ಟಿದೆ. ಭಾರತದೊಂದಿಗೆ ಸ್ನೇಹದ ಹಸ್ತ ಚಾಚಲು ವಿಶ್ವದ ಮುಂದುವರೆದ ರಾಷ್ಟ್ರಗಳು ಹಾತೊರೆಯುತ್ತಿದೆ.ಈ ರೀತಿಯ ಆತ್ಮವಿಶ್ವಾಸದ ದಿಟ್ಟ ಹೆಜ್ಜೆಯಿಂದ ದೇಶವಾಸಿಗಳು ಪಕ್ಷದ ಮೇಲೆ ಹೆಚ್ಚಿನ ವಿಶ್ವಾಸ ಮತ್ತು ನಂಬಿಕೆ ಇಟ್ಟು ಕೇಂದ್ರದಲ್ಲಿ ಸತತ ಮೂರು ಬಾರಿ ಹರಸಿ ಹಾರೈಸುತ್ತಿದ್ದಾರೆ. ಈ ವಿಶ್ವಾಸದ ಹೆಜ್ಜೆಯಲ್ಲಿ ನಾವೆಲ್ಲರೂ ಗಟ್ಟಿಯಾದ ಹೆಜ್ಜೆಯಿಟ್ಟು ಈ ವಿಶೇಷ ಅಭಿಯಾನವನ್ನು ಆಂದೋಲನವಾಗಿ ಪರಿವರ್ತಿಸೋಣ ಎಂದು ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಹೊಸನಗರ ಮಂಡಲ ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಪ್ರಮುಖರಾದ ದತ್ತಾತ್ರೇಯ , ಗಣಪತಿ , ಸುರೇಶ್ ಸ್ವಾಮಿರಾವ್ , ಯುವರಾಜ್, ರಾಜೇಶ್ , ಉಮೇಶ್ ಅವರು ಸೇರಿದಂತೆ ಇನ್ನು ಅನೇಕ ಮುಖಂಡರು ಉಪಸ್ಥಿತರಿದ್ದರು.

ಕೆರೆಹಳ್ಳಿ ಗಣಪತಿಯ ವಿಸರ್ಜನ ಪೂರ್ವ ಮೆರವಣಿಗೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

16 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

18 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago