ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ
ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ ಮನೆ ಬಾಗಿಲಲ್ಲಿ ರಾಶಿ ಅಡಿಕೆ ತೂಕದಲ್ಲಿ ವರ್ತಕ ಮೋಸ ಮಾಡಿದ್ದಾನೆ. ಮೋಸ ಮಾಡಿದ ಸ್ಥಳೀಯ ಅಡಿಕೆ ವರ್ತಕ ತಟ್ಟೆಹಳ್ಳಿ ದಿಲೀಪ. ಗಣಕೀಕೃತ ತಕ್ಕಡಿಯಲ್ಲಿ ಬೆಳೆಗಾರರಿಗೆ ಗಮನಕ್ಕೆ ಬಾರದಂತೆ ಒಂದು ಕ್ವಿಂಟಾಲ್ಗೆ 3 ಕೆ.ಜಿ ಅಡಕೆ ವಂಚಿಸಿ ಸಿಕ್ಕಿಬಿದ್ದಿದ್ದಾನೆ. ಒಂದು ಕ್ವಿಂಟಾಲ್ಗೆ 200 ರೂ. ಹಣ ಹೆಚ್ಚಿಗೆ ನೀಡುವುದಾಗಿ ಹೇಳಿ ಅಡಕೆ ಖರೀದಿಸಿದ್ದಾನೆ. ನಂತರ, ಖರೀದಿಸಿದ 45 ಅಡಿಕೆ ಚೀಲಗಳನ್ನು ಎರಡು ವಾಹನದಲ್ಲಿ ತುಂಬಲಾಗಿತ್ತು.
ಅನುಮಾನಗೊಂಡ ರೈತರು ಒಂದು ಚೀಲ ಅಡಕೆಯನ್ನು ತಕ್ಕಡಿ ಮೇಲೆ ಇರಿಸಿ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಯಾವುದೊ ಒಂದು ಚೀಲದಲ್ಲಿ ವ್ಯತ್ಯಾಸ ಆಗಿರಬಹುದೆಂದು ಇನ್ನೊಂದೆರಡು ಚೀಲಗಳನ್ನು ಕೆಳಗಿಳಿಸಿ ತೂಕ ಮಾಡಿದ್ದಾರೆ. ವರ್ತಕ ತುಂಬಿದ ಎಲ್ಲ ಚೀಲಗಳಲ್ಲೂ ಮೂರಾಲ್ಕು ಕೆ.ಜಿ ವ್ಯತ್ಯಾಸ ಕಾಣಿಸಿದೆ. ಎಚ್ಚೆತ್ತ ಬೆಳೆಗಾರರು ದಿಲೀಪ ಹಾಗೂ ಹಮಾಲಿ ಕಾರ್ಮಿಕರನ್ನು ಅಲ್ಲೇ ಇರುವಂತೆ ಹೇಳಿ ಗ್ರಾಮಸ್ಥರಿಗೆ ಮೋಸದ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ, ದಿಲೀಪನನ್ನು ಗ್ರಾಮದ ದೇವಸ್ಥಾನಕ್ಕೆ ಕರೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಪಂಚಾಯಿತಿ ನಡೆಸಲಾಗಿದೆ.
ಇನ್ನು ಗ್ರಾಮದಲ್ಲಿ ಹಿರಿಯರ ನೇತೃತ್ವದಲ್ಲಿ ಸೇರಿದ್ದ ಪಂಚಾಯಿತಿಯಲ್ಲಿ ತೂಕದಲ್ಲಿ ನಾನು ಮೋಸ ಮಾಡಿಲ್ಲ. ನಮ್ಮ ಹಮಾಲರು ಮೋಸ ಮಾಡಿದ್ದಾರೆಂದು ಹೇಳಿ ನುಣುಚಿಕೊಳ್ಳಲು ಯತ್ನಿಸಿದ್ದಾನೆ. ಹಮಾಲರನ್ನು ಕರೆಸಿ ಎಂದಾಗ ಅವರು ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆಂದು ಹೇಳಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಗ್ರಾಮಸ್ಥರು ದಿಲೀಪನೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಗ್ರಾಮ ಸಮಿತಿಯ ತೀರ್ಮಾನದಂತೆ ತೂಕದಲ್ಲಿ ಮೋಸ ಮಾಡಿದ ದಿಲೀಪನಿಗೆ ದಂಡ ವಿಧಿಸಿದ್ದಾರೆ. ವಂಚಕ ವರ್ತಕನಿಗೆ ಬರೋಬ್ಬರಿ 20 ಲಕ್ಷ ರೂ. ಹಣವನ್ನು ದಂಡದ ರೂಪದಲ್ಲಿ ನೀಡುವಂತೆ ಗ್ರಾಮ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್