ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ
ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ.
ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳು ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ತಲೆ ಮರೆಸಿಕೊಂಡ ಆರೋಪಿಗಳಾದ ಅರನೆಲ್ಲೆ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರುಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಆರ್.ಎಫ್.ಒ. ಅರವಿಂದ್ ಪಿ, ಡಿ.ವೈ.ಆರ್.ಎಫ್.ಒ. ಶಿವಕುಮಾರ್, ಬಿ.ಎಫ್.ಒ ಕೊಟ್ರೇಶ ದಾನಮ್ಮನವರ್, ಎಫ್ಒಗಳಾದ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…