January 11, 2026

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ – ಮಾಲು ಸಮೇತ ಓರ್ವನ ಬಂಧನ

ಶಿವಮೊಗ್ಗ : ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಂ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು ತಲೆಮರೆಸಿಕೊಂಡ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ.

ಸೆರೆ ಸಿಕ್ಕ ಆರೋಪಿಯನ್ನು ಅರೆನೆಲ್ಲಿ ಗ್ರಾಮದ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಎಂದು ಗುರುತಿಸಲಾಗಿದ್ದು, ಈತನನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳು ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ತಲೆ ಮರೆಸಿಕೊಂಡ ಆರೋಪಿಗಳಾದ ಅರನೆಲ್ಲೆ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರುಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಆರ್.ಎಫ್.ಒ. ಅರವಿಂದ್ ಪಿ, ಡಿ.ವೈ.ಆರ್.ಎಫ್.ಒ. ಶಿವಕುಮಾರ್, ಬಿ.ಎಫ್.ಒ ಕೊಟ್ರೇಶ ದಾನಮ್ಮನವರ್, ಎಫ್ಒಗಳಾದ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

About The Author

Leave a Reply

Your email address will not be published. Required fields are marked *

Exit mobile version