RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ
ರಿಪ್ಪನ್ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1499 ನೇ ಜನ್ಮ ದಿನದ ಪ್ರಯುಕ್ತ ಹುಬ್ಬುನ್ನಬಿ ಮಿಲಾದ್ ಕಾನ್ಪರೆನ್ಸ್ ಅಂಗವಾಗಿ ಸೌಹಾರ್ಧ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಮುಖಂಡರು , ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಿಪ್ಪನ್ಪೇಟೆ ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ.
ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ.
ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 26,27,28 ಮತ್ತು 29 ರಂದು ಆಚರಿಸಲಾಗುತ್ತದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ನಾಸೀರ್ ಹಮೀದ್ ಸಾಬ್ ತಿಳಿಸಿದರು.
ಈದ್ ಮಿಲಾದ್ ಆಚರಣೆಯ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಹೊಸನಗರ ರಸ್ತೆಯಲ್ಲಿ ದೀಪಾಲಾಂಕರ ಮಾಡಲಾಗಿದ್ದು ನೋಡುಗರ ಮನಸೆಳೆಯುವಂತಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…