RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವಕ್ಕೆ ಇಂದು ತೆರೆಬಿದ್ದಿತು.

ಗಣಪತಿಗೆ ಮಾಲಾರ್ಪಣೆ ನೆರವೇರಿಸಿದ ಶಾಸಕ ಆರಗ ಜ್ಞಾನೇಂದ್ರ,ಶಾಸಕ ಬೇಳೂರು ಗೋಪಾಲಕೃಷ್ಣ

ಕೇರಳದ ನವಿಲು ನೃತ್ಯ ತಂಡ ಮತ್ತು ಅರಕೆರೆಯ ವೀರಗಾಸೆ ಶಿಗ್ಗಾಂವ್‌ನ ಜಾಂಜಾ ಪಥಾಕ್, ಕೀಲುಕುದುರೆ ತಟ್ಟಿರಾಯ ತಂಡಗಳ ಜಾನಪದ ತಂಡಗಳ ಕಲಾ ಮೆರಗಿನ ನಡುವೆ ಯುವಕ ಯುವತಿಯರು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ದೃಶ್ಯ ಕಂಡುಬಂದಿತು.

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಗಣಪತಿಗೆ ಮಾಲಾರ್ಪಣೆ ನೆರವೇರಿಸಿದರು.ಇದೇ ಸಂಧರ್ಭದಲ್ಲಿ ಹಲವು ಸಂಘ ಸಂಸ್ಥೆಗಳಿಂದ ಮಾಲಾರ್ಪಣೆ ನೆರವೇರಿತು.

ಗಣೇಶ ಮೂರ್ತಿಯ ರಾಜಬೀದಿ ಉತ್ಸವವು ಶಾಂತಿಯಿಂದ ಯಶಸ್ವಿಯಾಗಿ ಜರುಗುವ ಮೂಲಕ ಹಲವು ಮುಸ್ಲಿಂ ಮುಖಂಡರು ಗಣಪತಿಗೆ ಸುಗಂಧರಾಜ ಮತ್ತು ಗುಲಾಬಿ ಹಾರವನ್ನು ಹಾಕಿ ಸ್ವಾಗತಿಸುತ್ತಿದ್ದು ಅಲ್ಲದೆ ಕೆಲವು ಕಡೆಯಲ್ಲಿ ತಂಪು ಪಾನಿಯ ಉಪಹಾರದ ವ್ಯವಸ್ಥೆಯನ್ನು ಮಾಡುವ ಜಾನಪದ ಕಲಾ ತಂಡದವರ ಕುಣಿತವನ್ನು ಕಂಡು ಮನಸೋತರು. ಇದರೊಂದಿಗೆ  ಹಿಂದೂ, ಮುಸ್ಲಿಂ ಎರಡು ಸಮುದಾಯದವರು ಸೌಹಾರ್ದತೆಯನ್ನು ಮೆರೆದಿರುವುದು ವಿಶೇಷವಾಗಿತ್ತು.

ಮೆರವಣಿಗೆಯಲ್ಲಿ ಜಾನಪದ ತಂಡಗಳ ಕಲರವ

ಹಿಂದು ಮಹಾಸಭಾ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಬಳ್ಳಾರಿ, ವರಸಿದ್ದಿ ವಿನಾಯಕ ದೇವಸ್ಥಾನ ಧರ್ಮದರ್ಶಿ ಈಶ್ವರಶೆಟ್ಟಿ, ಎಂ.ಬಿ. ಮಂಜುನಾಥ, ಎಂ.ಸುರೇಶಸಿಂಗ್, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಎನ್.ಸತೀಶ್, ಜಿಎಸ್‌ಬಿ ಸಮಾಜದ ಅಧ್ಯಕ್ಷ ಗಣೇಶ್ ಎನ್.ಕಾಮತ್, ಪಿ.ಸುಧೀರ್, ವಾಸುಶೆಟ್ಟಿ, ಡಿ.ಈ.ರವಿಭೂಷಣ, ಸಂದೀಪ್‌ಶೆಟ್ಟಿ, ಹೆಚ್.ಎನ್.ಚೋಳರಾಜ್, ಬೇಕರಿ ನಾರಾಯಣ, ಹೆಚ್.ಎನ್.ಉಮೇಶ್, ಶ್ರೀನಿವಾಸ ಅಚಾರ್, ತೀರ್ಥೇಶ್‌ ಅಡಿಕಟ್ಟು, ಆರ್.ಎಂ.ನವೀನ್, ಲಿಂಗರಾಜ, ಸೂರ್ಯಗೌಡ, ಕೆರೆಹಳ್ಳಿ ರವೀಂದ್ರ, ನಾಗರಾಜ ಕೆದ್ಲುಗುಡ್ಡೆ, ಆರ್.ರಾಘವೇಂದ್ರ, ಸುಜಯ್, ಸುನಿಲ್, ರಾಜೇಶ್, ಭೀಮರಾಜ್, ಎಸ್.ದಾನಪ್ಪ, ಚಂದ್ರಮಲ್ಲಾಪುರ, ಶೇಖರ, ಮಂಜುನಾಥ ಆಚಾರ್, ಆರ್. ರಂಜನ್, ಸುಂದರೇಶ್ ಹಾಗೂ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಡಿವೈಎಸ್‌ಪಿ ಗಜಾನನ ಸುತಾರ್, ಹೊಸನಗರ ವೃತ್ತ ನಿರೀಕ್ಷಕ ಗುರಣ್ ಹೆಬ್ಬಾಳ್, ಪಿ.ಎಸ್.ಐ. ಪ್ರವೀಣ್, ಪಿಡಿಒ ಮಧುಸೂದನ್, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಪೊಲೀಸ್ ಕಂದಾಯ ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗ ಹಾಜರಿದ್ದರು.

ಮುಸ್ಲಿಂ ಯುವಕರಿಂದ ಪಾನೀಯ ಸೇವೆ :

ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವು ಶಿವಮೊಗ್ಗ ರಸ್ತೆಯಿಂದ ತೀರ್ಥಹಳ್ಳಿ ರಸ್ತೆಗೆ ತೆರಳುವ ವೇಳೆಯಲ್ಲಿ ಸ್ಟಾರ್ ಪ್ರೂಟ್ಸ್ ಅಂಗಡಿಯ ಮುಂಭಾಗದಲ್ಲಿ ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರಿಗೆ ತಂಪು ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು.

ಈ ಸಂಧರ್ಭದಲ್ಲಿ ಅಫ್ಜಲ್ ಬ್ಯಾರಿ , ರಹೆಮಾನ್ ಚಾಲಿ , ಫೈಜಲ್ , ಇಸ್ಮಾಯಿಲ್ , ರಾಹಿಲ್  , ಸವದ್ ,ಅಶಿಶ್ , ಸಯನ್ ಹಾಗೂ ಇನ್ನಿತರ ಯುವಕರಿದ್ದರು.

ಮಾರ್ವಾಡಿ ಸಂಘದವರಿಂದ ಉಪಹಾರ ಸೇವೆ :

ಸಾಗರ ರಸ್ತೆಯ ಕೆಇಬಿ ಮುಂಭಾಗದ ಅರುಣ ಜುವೆಲ್ಲರ್ಸ್ ಮುಂಭಾಗದಲ್ಲಿ ಮುಖೇಶ್ ನೇತ್ರತ್ವದಲ್ಲಿ ಮಾರ್ವಾಡಿ ಸಂಘದವರು ಹಿಂದೂ ಕಾರ್ಯಕರ್ತರಿಗೆ ಉಪಹಾರ ಸೇವೆ ಸಲ್ಲಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

4 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

5 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

5 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

9 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

10 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

10 hours ago