ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು
ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು.
ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್ ಭಾಗದಲ್ಲಿ ಭಾರೀ ಜನದಟ್ಟಣೆ ಕಂಡುಬಂದಿತು.
ನಗರದ ಕೆಲವು ಕಡೆ ರಸ್ತೆ ಬದಿಗಳಲ್ಲಿ ಹೂವು, ಬಾಳೆ ದಿಂಡು, ಮಾವಿನ ಸೊಪ್ಪಿನ ರಾಶಿ ರಾಶಿ ಗ್ರಾಹಕರನ್ನು ಸೆಳೆದವು. ಹಬ್ಬದ ಅಂಗವಾಗಿ ಹೂವು, ಹಣ್ಣುಗಳ ಬೆಲೆ ಗಗನಕ್ಕೇರಿದ್ದವು.
ಮಾರುಕಟ್ಟೆಯಲ್ಲಿ ಕೆ.ಜಿ ಸೇಬಿಗೆ ₹280, ಕೆ.ಜಿ ದಾಳಿಂಬೆಗೆ ₹270, ಕೆ.ಜಿ ದ್ರಾಕ್ಷಿ ಬೆಲೆ ₹200, ಕೆ.ಜಿ ಮೋಸಂಬಿಗೆ ₹180, ಕೆ.ಜಿ ಕಿತ್ತಳೆಗೆ ₹ 200, ಬಾಳೆ ಹಣ್ಣಿಗೆ ₹ 80 ದರ ನಿಗದಿ ಮಾಡಲಾಗಿತ್ತು. ವ್ಯಾಪಾರಸ್ಥರು ಎಲ್ಲ ಹಣ್ಣುಗಳನ್ನು ಕೂಡಿಸಿ ಪ್ಯಾಕೇಜ್ ರೂಪದಲ್ಲಿ ಪೂಜೆಗಾಗಿ ಸಿದ್ಧಪಡಿಸಿದ್ದ ಬುಟ್ಟಿಗೆ ₹150 ದರ ನಿಗದಿ ಮಾಡಿದ್ದರು.
ಎರಡು ಬಾಳೆ ದಿಂಡಿಗೆ ₹ 30, ಮಾವಿನ ತೋರಣಕ್ಕೆ ₹ 10 ನಿಗದಿ ಮಾಡಿದ್ದರು. ಮಲ್ಲಿಗೆ ಹೂವು ಒಂದು ಮಾರು ₹100, ಮೊಗ್ಗಿನ ಒಂದು ಹಾರಕ್ಕೆ ₹ 300, ಕೆ.ಜಿ ಚೆಂಡು ಹೂವಿನ ಬೆಲೆ ₹ 200 ಇತ್ತು. ಒಂದು ತೆಂಗಿನ ಕಾಯಿ ಬೆಲೆ ₹ 25 ಇತ್ತು. ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಮಾರುಕಟ್ಟೆಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆ ಗ್ರಾಹಕರನ್ನು ಕಂಗಾಲು ಮಾಡಿತು.
ಇನ್ನೂ ತರಕಾರಿ ಬೆಲೆ ಕೂಡ ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಿದೆ. ಕೆ.ಜಿ ಟೊಮೆಟೊಗೆ ₹ 30, ಕೆ.ಜಿ ಆಲೂಗಡ್ಡೆಗೆ ₹ 50, ಹೀರೇಕಾಯಿ ಕೆ.ಜಿಗೆ ₹ 50, ಸೌತೆಕಾಯಿ ಕೆ.ಜಿಗೆ ₹ 60, ಬಿಟ್ರೂಟ್ ಕೆ.ಜಿ ₹ 70, ಕೆ.ಜಿ ಈರುಳ್ಳಿ ಬೆಲೆ ₹ 60, ಕೆ.ಜಿ ನುಗ್ಗೆಕಾಯಿ ₹ 80 ಹಾಗೂ ಸೊಪ್ಪಿನ ಕಟ್ಟು ಒಂದಕ್ಕೆ ₹ 10 ನಿಗದಿ ಮಾಡಲಾಗಿತ್ತು.
ಹಬ್ಬಗಳ ಸಂದರ್ಭದಲ್ಲಿ ಹೂವು, ಹಣ್ಣು ಸೇರಿದಂತೆ ಇನ್ನಿತರ ವಸ್ತುಗಳ ಬೆಲೆ ಗಗನಕ್ಕೇರಿಸಲಾಗುತ್ತದೆ. ಇದು ಗ್ರಾಹಕರಿಗೆ ಭಾರಿ ಹೊರೆಯಾಗುತ್ತದೆ ಸಂತೋಷ್ ಗೌಡ ಗ್ರಾಹಕ
ಹೂವು ಹಣ್ಣುಗಳ ಬೆಲೆ ಜಾಸ್ತಿ ಆಯಿತು. ಇದು ಗ್ರಾಹಕರಿಗೆ ಆರ್ಥಿಕವಾಗಿ ಸಾಕಷ್ಟು ಹೊರೆಯಾಗುತ್ತದೆ. ಹಬ್ಬದ ಹೊತ್ತಿನಲ್ಲಿಯೇ ಬೆಲೆಗಳು ಜಾಸ್ತಿ ಆಗುತ್ತವೆ.. ಸುಮಿತ್ರಾ ಗ್ರಾಹಕರು
ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಹಬ್ಬದ ಖರೀದಿ ಗೆ ಸೇರಿರುವ ಜನಸ್ತೋಮ ಹೆಚ್ಚು ಇದೆ, ನಾವು ಕೂಡ ಹೆಚ್ಚಿನ ದರ ನೀಡಿ ಖರೀದಿ ಮಾಡುತ್ತೇವೆ. ಹಬ್ಬಗಳು ಎಂದ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಬೆಲೆಯಲ್ಲಿ ಏರಿಳಿತ ಸಹಜ. ನಿರೂಪ್ ಕುಮಾರ್ ವ್ಯಾಪಾರಿ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…