ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಾಖವಳ್ಳಿ ಶಾಲೆಯ ಮುಖ್ಯ ಶಿಕ್ಷಕ ಹರೀಶ್
ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠ ಶಾಲೆ ಮುಖ್ಯ ಶಿಕ್ಷಕ ಹರೀಶ್ ಪಿ. ರವರಿಗೆ 2024-2025ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹೊಸನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ದಿನದಂದು ಪ್ರದಾನ ಮಾಡಲಾಯಿತು.
2007ರ ಫೆಬ್ರವರಿ 2 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ ಶಾಲೆ ಬಾಳೆಕೊಪ್ಪದಲ್ಲಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಇವರು 2016ರ ಸೆ.12 ರಿಂದ 2022ರ ಡಿ.14ರ ವರೆಗೆ ಮುಗುಡ್ತಿ ಕ್ಲಸ್ಟರ್ ನ ಕ್ರಿಯಾಶೀಲಾ ಸಿ.ಆರ್.ಪಿಯಾಗಿ ಕರ್ತವ್ಯ ನಿರ್ವಹಿಸಿ ನಂತರ 2022ರ ಡಿ.15 ರಂದು ಹೊಸನಗರ ತಾಲ್ಲೂಕಿನ ಸ.ಕಿ.ಪ್ರಾ. ಶಾಲೆ ಶಾಖವಳ್ಳಿಗೆ ವರ್ಗಾವಣೆಗೊಂಡು ಮುಖ್ಯ ಶಿಕ್ಷಕರಾಗಿ ಜವಾಬ್ದಾರಿ ವಹಿಸಿಕೊಂಡು ಎಸ್.ಡಿ.ಎಂ.ಸಿ. ಜೊತೆಗೆ ಹಳೆ ವಿದ್ಯಾರ್ಥಿಗಳ ಸಂಘ ರಚಿಸಿ ‘ನಮ್ಮ ಶಾಲೆ ನಮ್ಮ ಕೊಡುಗೆ’ ಎನ್ನುವ ಅಭಿಯಾನದಡಿ ಒಂದು ಸಮಿತಿ ರಚನೆ ಮಾಡಿ ಸಮುದಾಯದ ಸಹಾಭಾಗಿತ್ವದೊಂದಿಗೆ ದಾಖಲಾತಿ ಹೆಚ್ಚಳ, ಶೈಕ್ಷಣಿಕ ಗುಣಮಟ್ಟ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಮಾಡುವಲ್ಲಿ ಗಣನೀಯ ಪಾತ್ರವನ್ನು ನಿರ್ವಹಿಸಿ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ನೆಚ್ಚಿನ ಶಿಕ್ಷಕರಾಗಿದ್ದಾರೆ.
ಪ್ರಶಸ್ತಿ ಶಿಫಾರಸ್ಸು ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಆಯ್ಕೆ ಮಂಡಳಿಯ ಪದಾಧಿಕಾರಿಗಳಿಗೆ ಮತ್ತು ಕಾರ್ಯಕ್ರಮದ ಆಯೋಜಕರಿಗೆ, ನಮ್ಮ ಶಾಲೆ ನಮ್ಮ ಕೊಡುಗೆ ಸಮಿತಿ, ಹಳೆಯ ವಿದ್ಯಾರ್ಥಿ ವೃಂದಕ್ಕೆ ಎಸ್.ಡಿ.ಎಂ.ಸಿ ಮತ್ತು ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…